ಅರುಣ್ ಜೇಟ್ಲಿ 
ದೇಶ

ನೋಟು ನಿಷೇಧದ ನಂತರ ನೇರ ತೆರಿಗೆ ಸಂಗ್ರಹದ ಪ್ರಮಾಣ ಹೆಚ್ಚಾಗಿದೆ: ಅರುಣ್ ಜೇಟ್ಲಿ

ನೋಟು ನಿಷೇಧದ ದೇಶದಲ್ಲಿ ನೇರ ತೆರಿಗೆ ಸಂಗ್ರಹದ ಪ್ರಮಾಣ ಹೆಚ್ಚಾಗಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ...

ನವದೆಹಲಿ: ನೋಟು ನಿಷೇಧದ ಬಳಿಕ ದೇಶದಲ್ಲಿ ನೇರ ತೆರಿಗೆ ಸಂಗ್ರಹದ ಪ್ರಮಾಣ ಹೆಚ್ಚಾಗಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. 
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರುಣ್ ಜೇಟ್ಲಿ ಅವರು, ನೋಟು ನಿಷೇಧದ ಕ್ರಮವನ್ನು ಬೆಂಬಲಿಸಿದ ದೇಶದ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ನೋಟು ನಿಷೇಧದ ಕ್ರಮವನ್ನು ಜನತೆ ಶಾಂತ ರೀತಿಯಲ್ಲಿ ಸ್ವೀಕರಿಸಿದ್ದಾರೆ. ಅವರಿಗೆ ಧನ್ಯವಾದಗಳು. ಇನ್ನು ನೋಟು ನಿಷೇಧದ ನಂತರ ದೇಶದಲ್ಲಿ ನೇರ ತೆರಿಗೆ ಸಂಗ್ರಹದ ಪ್ರಮಾಣ ಹೆಚ್ಚಾಗಿದೆ. ನೇರ ತೆರಿಗೆ ಪಾವತಿ ಶೇಖಡ 13.6ರಷ್ಟು ಹೆಚ್ಚಳವಾಗಿದೆ. 
ರಾಷ್ಟ್ರೀಯ ರಿಸರ್ವ್ ಬ್ಯಾಂಕ್ ನಲ್ಲಿದ್ದ ನೋಟುಗಳೆಲ್ಲಾ ಚಲಾವಣೆಗೆ ಬಂದಿದೆ. ಬಹುತೇಕ ಹಳೇ ನೋಟುಗಳಿಗೆ ಪರ್ಯಾಯವಾಗಿ ಹೊಸ ನೋಟು ಚಲಾವಣೆಯಾಗುತ್ತಿದೆ. ಅದರಲ್ಲೂ 500 ರುಪಾಯಿ ಮುಖಬೆಲೆಯ ಹೊಸ ನೋಟುಗಳ ಚಲಾವಣೆ ಹೆಚ್ಚಾಗಿದೆ. ಇನ್ನು ದೇಶದಲ್ಲಿ ನೋಟು ನಿಷೇಧ ಪರಿಣಾಮ ಈಗ ಕಣ್ಣಿಗೆ ಬೀಳುತ್ತಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT