ಗಣಿ ಕುಸಿತದ ಚಿತ್ರ 
ದೇಶ

ಜಾರ್ಖಂಡ್ ಗಣಿ ಕುಸಿತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ, ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ ಪರಿಹಾರ

ಜಾರ್ಖಂಡ್ ನ ರಾಂಚಿಯಿಂದ 250 ಕಿಲೋ ಮೀಟರ್ ದೂರದಲ್ಲಿ ಗೊಡ್ಡಾ ಎಂಬಲ್ಲಿ ಲಾಲ್ ಮಾಟಿಯಾ...

ರಾಂಚಿ: ಜಾರ್ಖಂಡ್ ನ ರಾಂಚಿಯಿಂದ 250 ಕಿಲೋ ಮೀಟರ್ ದೂರದಲ್ಲಿ ಗೊಡ್ಡಾ ಎಂಬಲ್ಲಿ ಲಾಲ್ ಮಾಟಿಯಾ ಕಲ್ಲಿದ್ದಲು ಗಣಿ ಕುಸಿತದ ದುರ್ಘಟನೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜಾರ್ಖಂಡ್ ಮುಖ್ಯಮಂತ್ರಿ ಜೊತೆ ಮಾತನಾಡಿ ಮಾಹಿತಿ ಪಡೆದುಕೊಂಡರು.
ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಅವರಿಗೆ ದೂರವಾಣಿ ಕರೆ ಮಾಡಿ ಕಲ್ಲಿದ್ದಲಿನಲ್ಲಿ ಮಣ್ಣು ಕುಸಿತದ ಕಾರಣ ಕೇಳಿ ತಿಳಿದುಕೊಂಡರು. ಈ ಮಧ್ಯೆ ಮುಖ್ಯಮಂತ್ರಿ ರಘುಬರ್ ದಾಸ್ ಮೃತಪಟ್ಟ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 25,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಇತ್ತೀಚೆಗೆ ಬಂದ ಮಾಹಿತಿ ಪ್ರಕಾರ ಗಣಿಯಲ್ಲಿ ಮಣ್ಣು ಕುಸಿತದಡಿ ಸಿಲುಕಿ ಮೃತಪಟ್ಟವರ ಸಂಖ್ಯೆ 9ಕ್ಕೇರಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಪಾಟ್ನಾದಿಂದ ಮತ್ತೆ ಮೂರು ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆ ತಂಡ ಲಾಲ್ ಮಾಟಿಯಾಗೆ ತಲುಪಿದೆ.
ಮಣ್ಣು ಕುಸಿತದಿಂದಾಗಿ ನಿನ್ನೆ ವಿದ್ಯುತ್ ಸಂಪರ್ಕ ಕಡಿದಿತ್ತು. ದಟ್ಟ ಮಂಜು ಕೂಡ ಮುಸುಕಿತ್ತು. ಹೀಗಾಗಿ ರಕ್ಷಣಾ ಕಾರ್ಯಕ್ಕೆ ನಿನ್ನೆ ರಾತ್ರಿ ಅಡ್ಡಿಯುಂಟಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT