ಸುರೇಶ್ ಪ್ರಭು 
ದೇಶ

ತುಮಕೂರು-ಬಳ್ಳಾರಿ ಹೊಸ ರೈಲು ಮಾರ್ಗ ಉದ್ಘಾಟನೆ

ರಾಯದುರ್ಗ ತುಮಕೂರು ರೈಲ್ವೆ ಯೋಜನೆಯ ಮೊದಲ ಹಂತದ (ತುಮಕೂರು-ಬಳ್ಳಾರಿವರೆಗಿನ) ಹೊಸ ರೈಲು ಮಾರ್ಗ ಡಿ.30 ರಂದು ಉದ್ಘಾಟನೆಯಾಗಿದೆ.

ವಿಜಯವಾಡ: ಭೂಸ್ವಾಧೀನ ಪ್ರಕ್ರಿಯೆ, ಅನುದಾನದ ಮುಗ್ಗಟ್ಟು ಸೇರಿದಂತೆ ಹಲವು ಕಾರಣಗಳಿಂದಾಗಿ ವಿಳಂಬವಾಗಿದ್ದ ರಾಯದುರ್ಗ ತುಮಕೂರು ರೈಲ್ವೆ ಯೋಜನೆಯ ಮೊದಲ ಹಂತದ (ತುಮಕೂರು-ಬಳ್ಳಾರಿವರೆಗಿನ) ಹೊಸ ರೈಲು ಮಾರ್ಗ ಡಿ.30 ರಂದು ಉದ್ಘಾಟನೆಯಾಗಿದೆ. 
ವಿಜಯವಾಡದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ವೇಳೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ವಿಡಿಯೋ ಕಾನ್ಫರೆನ್ಸ್ ಮೂಲಕ ರೈಲನ್ನು ಉದ್ಘಾಟನೆ ಮಾಡಿದ್ದಾರೆ. ರಾಯದುರ್ಗ-ತುಮಕೂರು 40 ಕಿಮಿ ದೂರದ ರೈಲು ಮಾರ್ಗ ಉದ್ಘಾಟನೆಯಾಗಿರುವುದು ತುಮಕೂರು ಹಾಗೂ ಬಳ್ಳಾರಿಯ ಕೈಗಾರಿಕ ವಲಯದಲ್ಲಿ ಹೆಚ್ಚಿನ ಪ್ರಗತಿ, ವಹಿವಾಟಿಗೆ ನೆರವಾಗಲಿದೆ. 
ದಕ್ಷಿಣ ರೈಲ್ವೆ ವಲಯ ವಿಭಾಗದಿಂದ ಸುಮಾರು 330 ಕೋಟಿ ರೂಪಾಯಿ ವೆಚ್ಚದಲ್ಲಿ ಮೊದಲ ಹಂತದ ರೈಲು ಮಾರ್ಗವನ್ನು ನಿರ್ಮಿಸಲಾಗಿದ್ದು, ರಾಯದುರ್ಗ, ಕಲ್ಯಾಣದುರ್ಗ ಮಾರ್ಗವಾಗಿ ಸಂಚರಿಸಲಿದ್ದು, ರಸ್ತೆ ಮೇಲ್ಭಾಗದಲ್ಲಿರುವ 6 ಸೇತುವೆ ಹಾಗೂ 16 ಅಂಡರ್ ಬ್ರಿಡ್ಜ್ ಗಳ ಮೂಲಕ ಕ್ರಮಿಸಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 
ಡಿ.30 ರಂದು ಉದ್ಘಾಟನೆಯಾಗಿರುವ ತುಮಕೂರು-ರಾಯದುರ್ಗ ರೈಲ್ವೆ ಮಾರ್ಗದ ಯೋಜನೆ 2007-08 ರಲ್ಲಿ ಮಂಜೂರಾತಿ ಪಡೆದು, 2010-11ರಲ್ಲಿ ಅನುಮೋದನೆಗೊಂಡಿತ್ತು. ಈ ಯೋಜನೆಗೆ ಆಂಧ್ರ, ಕರ್ನಾಟಕ ಹಾಗೂ ರೈಲ್ವೆ ಇಲಾಖೆ ಶೇ 50:50 ಅನುಪಾತದಲ್ಲಿ ಯೋಜನೆಗೆ ಹಣ ಹೂಡಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT