ಕಿರಣ್ಮೊಯ್ ನಂದಾ, ಮುಲಾಯಂ ಸಿಂಗ್ ಯಾದವ್ ಮತ್ತು ನರೇಶ್ ಅಗರ್ವಾಲ್ 
ದೇಶ

ಸಮಾಜವಾದಿ ಪಕ್ಷದಲ್ಲಿ ಮತ್ತೆ ಭಿನ್ನಮತ;ಕಿರಣ್ಮೊಯ್ ನಂದಾ, ನರೇಶ್ ಅಗರ್ವಾಲ್ ಉಚ್ಛಾಟನೆ

ಸಮಾಜವಾದಿ ಪಕ್ಷದಲ್ಲಿ ಗಂಟೆಗೊಂದು ಬೆಳವಣಿಗೆಗಳು ಆಗುತ್ತಲೇ ಇದೆ. ಪಕ್ಷದ ವರಿಷ್ಠ...

ನವದೆಹಲಿ:ಸಮಾಜವಾದಿ ಪಕ್ಷದಲ್ಲಿ ಗಂಟೆಗೊಂದು ಬೆಳವಣಿಗೆಗಳು ಆಗುತ್ತಲೇ ಇದೆ. ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಇಂದು ಕಿರಣ್ಮೊಯ್ ನಂದಾ ಮತ್ತು ನರೇಶ್ ಅಗರ್ವಾಲ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರನ್ನು ಆರು ವರ್ಷಗಳ ಅವಧಿಗೆ ವಜಾ ಮಾಡಿದ ಕೆಲವೇ ಗಂಟೆಗಳಲ್ಲಿ ಮುಲಾಯಂ ಸಿಂಗ್ ಯಾದವ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿಯ ಸಲಹೆ ಪಡೆಯದೆ ಈ ಸಭೆಯನ್ನು ಕರೆಯಲಾಗಿದ್ದು, ಅದರಲ್ಲಿ ಅಂಗೀಕರಿಸಿದ ಪ್ರಸ್ತಾವನೆಗಳು ಅಸಂವಿಧಾನಿಕ ಮತ್ತು ಕಾನೂನಿಗೆ ವಿರುದ್ಧ. ಈ ಸಭೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಈ ಮೊದಲು ಮುಲಾಯಂ ಸಿಂಗ್ ಯಾದವ್ ತಾವು ಹೊರಡಿಸಿದ ಪತ್ರದಲ್ಲಿ ಹೇಳಿದ್ದರು.
ಇಂದು ಬೆಳಗ್ಗೆ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ ಗೋಪಾಲ್ ವರ್ಮಾ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಸಭೆ ಕರೆದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಪಕ್ಷದ ಅಧ್ಯಕ್ಷ ಎಂದು ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT