ಕೃಷಿ ಉತ್ಪಾದನೆ ಕುಂಟಿತ, ಆಹಾರ ಉತ್ಪನ್ನಗಳ ಆಮದು ಏರಿಕೆ 
ದೇಶ

ಕೃಷಿ ಉತ್ಪಾದನೆ ಕುಂಟಿತ, ಆಹಾರ ಉತ್ಪನ್ನಗಳ ಆಮದು ಏರಿಕೆ

ಕೃಷಿ ಉತ್ಪಾದನೆ ಕುಂಟಿತವಾಗಿದ್ದು ಭಾರತ ಶೀಘ್ರವೆ ಹಲವು ಆಹಾರ ಉತ್ಪನ್ನಗಳ ಅಮದುದಾರನಾಗುವ ಸಾಧ್ಯತೆ ಇದೆ.

ನವದೆಹಲಿ: ಕೃಷಿ ಉತ್ಪಾದನೆ ಕುಂಟಿತವಾಗಿದ್ದು ಭಾರತ ಶೀಘ್ರವೆ ಹಲವು ಆಹಾರ ಉತ್ಪನ್ನಗಳ ಅಮದುದಾರನಾಗುವ ಸಾಧ್ಯತೆ ಇದೆ.  ಕುಸಿತ ಕಂಡಿರುವ ಕೃಷಿ ಉತ್ಪಾನೆಯನ್ನು ಸುಧಾರಿಸಿ ಬೆಲೆ ಏರಿಕೆಯನ್ನು ತಡೆಗಟ್ಟುವುದಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಹಾರ ಮತ್ತು ಕೃಷಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮುಂದಿನ ವರ್ಷದಿಂದ ಭಾರತ ಪ್ರಮುಖ ಆಹಾರ ಪದಾರ್ಥಗಳನ್ನು ಆಮದು ಮಾಡಿಕೊಳ್ಳಬೇಕಾಗುತ್ತದೆ ಎಂದು ವರ್ತಕರು ಎಚ್ಚರಿಕೆ ನೀಡಿದ್ದಾರೆ. ನಿರಂತರವಾಗಿ ಎದುರಾದ ಬಲಗಾಲ, ಕೃಷಿ ಕ್ಷೇತ್ರದ ಮೇಲೆ ದೀರ್ಘಾವಧಿಯ ಬಂಡವಾಳ ಹೂಡಿಕೆಯ ಕೊರತೆ  ಹಾಗೂ ಬೆಳವಣಿಗೆಯಾಗುತ್ತಿರುವ ಜನಸಂಖ್ಯೆಯ ಬೆಡಿಕೆ ಭಾರತ ದೇಶ ಆಹಾರ ಪದಾರ್ಥಗಳ ವಿಷಯದಲ್ಲಿ ಸ್ವಾವಲಂಬಿಯಾಗುವುದಕ್ಕೆ ಸವಾಲಾಗಿದೆ.
ಕೃಷಿ ಉತ್ಪಾದನೆ ಕುಟುಂಟಿತವಾಗಿರುವುದು ದೇಶದ ಆರ್ಥಿಕ ಬೆಳವಣಿಗೆಗೂ ಪ್ರತಿಕೂಲ ಪರಿಣಾಮ ಬೀರಲಿದ್ದು, ಕೃಷಿ ಉತ್ಪಾದನೆ ಏರಿಕೆ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಕೆಲವೊಂದು ಗಂಭೀರವಾದ ಸಲಹೆ ನೀಡಿದ್ದು ಆಹಾರ ಉತ್ಪನ್ನಗಳ ಸರಬರಾಜು ಹಾಗೂ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವಂತೆ ಕೃಷಿ ವಲಯಕ್ಕೆ ಸಂಬಂಧಿಸಿದ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಭಾರತ 16 ವರ್ಷಗಳಲ್ಲೇ ಮೊದಲ ಬಾರಿಗೆ ಹೊರಗಿನಿಂದ ಜೋಳ ಖರೀದಿಸಿದೆ, ಇನ್ನು ಉಳಿದ ಪ್ರಮುಖ ಆಹಾರ ಉತ್ಪನ್ನಗಳನ್ನೂ ಶೀಘ್ರವೇ ಆಮದು ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCROLL FOR NEXT