ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ) 
ದೇಶ

ಬಿಜೆಪಿ ಆಡಳಿತವಿರುವ ಸಾರ್ವಜನಿಕ ಸಂಸ್ಥೆಗಳಿಂದ ಹಣ ಲೂಟಿ: ಕೇಜ್ರಿವಾಲ್

ಆಡಳಿತಾರೂಢ ಬಿಜೆಪಿ ಅಧೀನದಲ್ಲಿರುವ ಸಾರ್ವಜನಿಕ ಸಂಸ್ಥೆಗಳು ಜನರಿಂದ ಹಣವನ್ನು ಲೂಟಿ ಮಾಡುತ್ತಿವೆಯೇ ಹೊರತು ಕೆಲಸ ಮಾಡುತ್ತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ...

ನವದೆಹಲಿ: ಆಡಳಿತಾರೂಢ ಬಿಜೆಪಿ ಅಧೀನದಲ್ಲಿರುವ ಸಾರ್ವಜನಿಕ ಸಂಸ್ಥೆಗಳು ಜನರಿಂದ ಹಣವನ್ನು ಲೂಟಿ ಮಾಡುತ್ತಿವೆಯೇ ಹೊರತು ಕೆಲಸ ಮಾಡುತ್ತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಒಳಚರಂಡಿ ಕಾರ್ಮಿಕರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೇಜ್ರಿವಾಲ್ ಅವರು, ದೆಹಲಿ ಅಭಿವೃದ್ಧಿಗೆ ತೆರಿಗೆ ಹೆಸರಿನಲ್ಲಿ ಸಾರ್ವಜನಿಕರು ನೀಡುತ್ತಿರುವ ಹಣವನ್ನು ಬಿಜೆಪಿ ಅಧೀನದಲ್ಲಿರುವ ಸಾರ್ವಜನಿಕ ಸಂಸ್ಥೆಯ ಅಧಿಕಾರಿಗಳು ಲೂಟಿ ಮಾಡುತ್ತಿದ್ದಾರೆ. ದೆಹಲಿ ಸಾರ್ವಜನಿಕ ಸಂಸ್ಥೆಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಇದೊಂದು ದೊಡ್ಡ ಹಗರಣವಾಗಿದೆ ಎಂದು ಹೇಳಿದರು.

"ಭ್ರಷ್ಟಾಚಾರ ನಡೆದಿಲ್ಲವೆಂದಾದರೆ ತನಿಖೆಗೆ ನೀವೇಕೆ ಹೆದರುತ್ತಿದ್ದೀರಿ. ದಶಕಗಳಿಂದ ಈ ವ್ಯವಸ್ಥೆಯನ್ನು ಸಹಿಸಿಕೊಂಡು ಬರಲಾಗಿದ್ದು, ಇದೀಗ ತಿರುಗಿ ಬೀಳುವ ಸಮಯ. ಆರ್ ಟಿಐ ಮೂಲಕ ಸಾರ್ವಜನಿಕ ಸಂಸ್ಥೆಗಳ ಭ್ರಷ್ಟಾಚಾರವನ್ನು ಪ್ರಶ್ನಿಸಬಹುದಾಗಿದೆ. ಅಲ್ಲದೆ ಸೆಕ್ಷನ್ 486ರ ಅಡಿಯಲ್ಲಿ ದೆಹಲಿ ಸಾರ್ವಜನಿಕ ಸಂಸ್ಥೆಗಳ ಖಾತೆಗಳ ವರದಿ ಪಡೆಯುವ ಅಧಿಕಾರ ದೆಹಲಿ ಸರ್ಕಾರಕ್ಕಿದೆ. 2012-13ರಲ್ಲಿ ಎನ್ ಡಿಎಂಸಿಗೆ 526 ಕೋಟಿ ಅನುದಾನ ನೀಡಲಾಗಿತ್ತು. 2013-14ರಲ್ಲಿ 556 ಕೋಟಿ ಮತ್ತು 2014-15ರಲ್ಲಿ 545 ಕೋಟಿ ಅನುದಾನ ನೀಡಲಾಗಿತ್ತು. ಇದಲ್ಲದೆ 100 ಕೋಟಿ ಹೆಚ್ಚುವರಿ ಅನುದಾನ ಕೂಡ ಬಿಡುಗಡೆಯಾಗಿತ್ತು. ಹಾಗಾದರೆ ಈ ಹಣವೆಲ್ಲಾ ಎಲ್ಲಿಗೆ ಹೋಯಿತು.

ಇದೊಂದು ದೊಡ್ಡ ಹಗರಣವಾಗಿದ್ದು, ಇದನ್ನು ತನಿಖೆ ಮಾಡುವವರೆಗೂ ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT