ಮುಸ್ಲಿಂ ಸಮುದಾಯದ ಪ್ರಮುಖ ನಾಯಕರ ಜತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ಇಸಿಸ್ ಅಪಾಯದ ಬಗ್ಗೆ ತಿಳಿಹೇಳಿ: ಮುಸ್ಲಿಂ ನಾಯಕರಿಗೆ ಕೇಂದ್ರ ಸರ್ಕಾರ ಮನವಿ

ದೇಶದ ಮುಸ್ಲಿಂ ಯುವಕರು ಇಸಿಸ್ ನಂತಹ ಉಗ್ರ ಸಂಘಟನೆಯತ್ತ ಆಕರ್ಷಣೆಗೆ ಒಳಗಾಗದೇ ಇರಲು ಮುಸ್ಲಿಂ ಧರ್ಮ...

ನವದೆಹಲಿ: ದೇಶದ ಮುಸ್ಲಿಂ ಯುವಕರು ಇಸಿಸ್ ನಂತಹ ಉಗ್ರ ಸಂಘಟನೆಯತ್ತ ಆಕರ್ಷಣೆಗೆ ಒಳಗಾಗದೇ ಇರಲು ಮುಸ್ಲಿಂ ಧರ್ಮ ಗುರುಗಳು ತಿಳಿಹೇಳಬೇಕೆಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ. 
ಭಾರತದ ಹಲವಾರು ರಾಜ್ಯಗಳಿಂದ ಮುಸ್ಲಿಂ ಯುವಕರು ಉಗ್ರ ಸಂಘಟನೆ ಐಎಸ್ ನತ್ತ ಆಕರ್ಷಣೆಗೆ ಒಳಗಾಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಮಂಗಳವಾರ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರ ಜತೆ ಚರ್ಚೆ ನಡೆಸಿತು.
ಧಾರ್ಮಿಕ ನಾಯಕರ ಜೊತೆಗೆ ರಾಜಕಾರಣಿಗಳೂ ಕೂಡ ಸಮುದಾಯದ ಯುವಕರು ಮನವೊಲಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಆಶಿಸುತ್ತಿದೆ. ಅದಕ್ಕಾಗಿ ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ ಸೇರಿದಂತೆ ಪ್ರಮುಖರನ್ನೂ ಓಲೈಸಲೂ ಸರ್ಕಾರ ಮುಂದಾಗಿ ಎಂದು ತಿಳಿದು ಬಂದಿದೆ.
ಗುಪ್ತಚರ ಸಂಸ್ಥೆಗಳ ಮಾಹಿತಿ ಪ್ರಕಾರ ಮುಂಬೈ ಸಮೀಪದ ಕಲ್ಯಾಣ್ ನ ಇಬ್ಬರು, ಆಸ್ಟ್ರೇಲಿಯಾ ಮೂಲದ ಕಾಶ್ಮೀರಿ ಯುವಕ, ಕರ್ನಾಟಕ ಮತ್ತು ತೆಲಂಗಾಣದ ತಲಾ ಒಬ್ಬ, ಒಮನ್ ಮತ್ತು ಸಿಂಗಾಪುರದಲ್ಲಿರುವ ಭಾರತೀಯ ಮೂಲದ ಯುವಕರು ಐಎಸ್ ಸಂಘಟನೆಗಾಗಿ ಹೋರಾಡುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಗುಪ್ತಚರ ಸಂಸ್ಥೆ ನಿಗಾ ಇರಿಸಿದೆ. 
ಇದೇ ವೇಳೆ ಹಲವು ಸಂದರ್ಭಗಳಲ್ಲಿ ಭಯೋತ್ಪಾದನೆ ಹೆಸರಿನಲ್ಲಿ ಸಮುದಾಯದ ಯುವಕರನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸುವುದನ್ನು ಧಾರ್ಮಿಕ ಮುಖಂಡರು ಪ್ರಸ್ತಾಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT