ಸಾಂದರ್ಭಿಕ ಚಿತ್ರ 
ದೇಶ

ತಪಾಸಣೆಗೆ ಬೇಸತ್ತ ಪ್ರಯಾಣಿಕ ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ಹೇಳಿದ

ವಿಮಾನ ನಿಲ್ದಾಣದಲ್ಲಿ ನಡೆಯುತ್ತಿದ್ದ ಸರಣಿ ಭದ್ರತಾ ತಪಾಸಣೆಯಿಂದಾಗಿ ಬೇಸತ್ತಿದ್ದ ಪ್ರಯಾಣಿನೋರ್ವ, ವಿಮಾನದಲ್ಲಿ ಬಾಂಬ್ ಎಂದು ಸುಳ್ಳು ವದಂತಿ ಹಬ್ಬಿಸಿರುವ ಘಟನೆಯೊಂದು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ನಡೆದಿದೆ...

ನವದೆಹಲಿ: ವಿಮಾನ ನಿಲ್ದಾಣದಲ್ಲಿ ನಡೆಯುತ್ತಿದ್ದ ಸರಣಿ ಭದ್ರತಾ ತಪಾಸಣೆಯಿಂದಾಗಿ ಬೇಸತ್ತಿದ್ದ ಪ್ರಯಾಣಿನೋರ್ವ, ವಿಮಾನದಲ್ಲಿ ಬಾಂಬ್ ಎಂದು ಸುಳ್ಳು ವದಂತಿ ಹಬ್ಬಿಸಿರುವ ಘಟನೆಯೊಂದು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ನಡೆದಿದೆ.

ದೆಹಲಿಯಿಂದ ಚೆನ್ನೈಗೆ ಜೆಟ್ ಏರ್ ವೇಸ್ ನ ವಿಮಾನ 9w-821 ವಿಮಾನ ಹೊರಟಿತ್ತು. ಈ ವೇಳೆ ನಿಲ್ದಾಣದಲ್ಲಿ ಸಿಬ್ಬಂದಿಗಳು ಸರಣಿ ಭದ್ರತಾ ತಪಾಸಣೆ ನಡೆಸುತ್ತಿದ್ದರು. ಇದರಿಂದ ಬೇಸತ್ತ ಪ್ರಯಾಣಿಕನೊಬ್ಬ ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ವದಂತಿಯೊಂದನ್ನು ಹಬ್ಬಿಸಿದ್ದಾನೆ. ಇದರಿಂದಾಗಿ ವಿಮಾನ ನಿಲ್ಧಾಣದಲ್ಲಿ ಕೆಲವು ಗಂಟೆಗಳ ಕಾಲ ಆತಂಕದ ವಾತಾವಾರಣ ನಿರ್ಮಾಣವಾಗಿತ್ತು.

ಈ ವದಂತಿಯಿಂದಾಗಿ ವಿಮಾನದಲ್ಲಿ ಪ್ರಯಾಣಿಸಬೇಕಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಮಗಳು ಪ್ರಿಯಾಂಕಾ ವಾದ್ರಾ ಅವರು ಅನಿವಾರ್ಯವಾಗಿ ಪ್ರಯಾಣವನ್ನು ರದ್ದು ಮಾಡಬೇಕಾದ ಪರಿಸ್ಥಿತಿ ಬಂದೊದಗಿತ್ತು.

ಇಷ್ಟಕ್ಕೂ ಏನಿದು ಘಟನೆ
ವಿಮಾನದಲ್ಲಿ ಪ್ರಯಾಣಿಸಲು ಸಿದ್ಧನಿದ್ದ ಉದ್ಯಮಿಯೊಬ್ಬನ ಬ್ಯಾಗ್ ನ್ನು ಸಿಬ್ಬಂದಿಗಳು ಪದೇ ಪದೇ ತಪಾಸಣೆ ನಡೆಸಿದ್ದಾರೆ. ಈಗಾಗಲೇ 2 ಬಾರಿ ತಪಾಸಣೆ ಮಾಡಿದ್ದ ಸಿಬ್ಬಂದಿಗಳು ಮತ್ತೆ ಮೂರನೇ ಬಾರಿಯೂ ತಪಾಸಣೆ ಮಾಡಲು ಬ್ಯಾಗ್ ತೆಗೆಯುವಂತೆ ಹೇಳಿದ್ದಾರೆ. ಹೀಗಾಗಿ ತಪಾಸಣೆಯಿಂದ ಬೇಸತ್ತಿದ್ದ ಉದ್ಯಮಿ ತಾನು ಬಾಂಬ್ ಕೊಂಡೊಯ್ಯುತ್ತಿದ್ದು, ವಿಮಾನವನ್ನು ಸ್ಪೋಟಿಸಲು ಸಂಚು ರೂಪಿಸಿದ್ದೇನೆಂದು ಸಿಬ್ಬಂದಿಗಳ ಬಳಿ ಸುಳ್ಳು ಹೇಳಿದ್ದಾನೆ.

ಪ್ರಯಾಣಿಕನ ಈ ಮಾತನ್ನು ಕೇಳಿದ ಸಿಬ್ಬಂದಿಗಳು ಕೂಡಲೇ ವಿಮಾನದಲ್ಲಿ ಎಚ್ಚರಿಕೆಯ ಸಂದೇಶವನ್ನು ರವಾನಿಸಿ ಭದ್ರತಾ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆದು ಬ್ಯಾಗ್ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ ಬ್ಯಾಗ್ ನಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿರಲಿಲ್ಲ. ಹೀಗಾಗಿ ಉದ್ಯಮಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆಗೊಳಪಡಿಸಿದಾಗ ಸತ್ಯ ಹೊರಬಂದಿದೆ. ನಿಲ್ದಾಣದಲ್ಲಿ ನಡೆದ ರಾದ್ದಾಂತದಿಂದ ಬೇಸತ್ತಿದ್ದ ಸೋನಿಯಾ ಹಾಗೂ ಅವರ ಮಗಳು ಪ್ರಿಯಾಂಕಾ ಮತ್ತೊಂದು ವಿಮಾನದಲ್ಲಿ ಚೆನ್ನೈಗೆ ಪ್ರಯಾಣ ಬೆಳೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT