ಮನಿಶ್ ತಿವಾರಿ 
ದೇಶ

ಅನುಪಮ್‌ ಖೇರ್‌ ಗೆ ವೀಸಾ ಕೊಡಿಸಲು ಮೋದಿ 'ಸ್ನೇಹಿತ' ಷರೀಫ್ ಜತೆ ಮಾತನಾಡಲಿ: ತಿವಾರಿ

ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರ ವೀಸಾ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಮನಿಶ್ ತಿವಾರಿ ಅವರು, ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರ ವೀಸಾ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಮನಿಶ್ ತಿವಾರಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನಟನಿಗೆ ವೀಸಾ ಕೊಡಿಸಲು ತಮ್ಮ ಸ್ನೇಹಿತ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತನಾಡಲಿ ಎಂದು ಬುಧವಾರ ಟ್ವಿಟ್ ಮಾಡಿದ್ದಾರೆ.
'ಭಾರತ ಸಹಿಷ್ಣುತಾ ದೇಶ ಎಂದು ಪ್ರಚಾರ ಮಾಡುತ್ತಿರುವ ಖೇರ್ ಅವರು ಪಾಕಿಸ್ತಾನಕ್ಕೆ ತೆರಳಲು ಉತ್ಸುಕರಾಗಿದ್ದರೆ, ಪ್ರಧಾನಿ ಮೋದಿ ಅವರು ತಮ್ಮ ಸ್ನೇಹಿತನಿಗೆ ವೀಸಾ ಕೊಡಿಸಲು ಮತ್ತೊಬ್ಬ ಸ್ನೇಹಿತ ನವಾಜ್ ಷರೀಫ್ ಅವರೊಂದಿಗೆ ಖಂಡಿತ ಮಾತನಾಡಿಬೇಕು' ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.
ಅನುಪಮ್ ಖೇರ್ ಅವರು ಫೆಬ್ರವರಿ 5ರಿಂದ ಕರಾಚಿಯಲ್ಲಿ ಆರಂಭವಾಗಲಿರುವ ನಾಲ್ಕು ದಿನಗಳ ಸಾಹಿತ್ಯ ಉತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಬೇಕಾಗಿತ್ತು. ಆದರೆ ಪಾಕಿಸ್ತಾನ ಅವರಿಗೆ ವೀಸಾ ನೀಡಲು ನಿರಾಕರಿಸಿದೆ.
ಇದಕ್ಕೂ ಮುನ್ನ ಕಾಶ್ಮೀರ ಪಂಡಿತರ ಬಗ್ಗೆ ಅನುಪಮ್ ಖೇರ್ ಅವರ ಹೇಳಿಕೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಪರವಾದ ಅವರ ನಿಲುವು ಪಾಕ್ ವೀಸಾ ನಿರಾಕರಿಸಲು ಕಾರಣವಾಗಿರಬಹುದು ಎಂದು ತಿವಾರಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT