ಮನಿಶ್ ತಿವಾರಿ 
ದೇಶ

ಅನುಪಮ್‌ ಖೇರ್‌ ಗೆ ವೀಸಾ ಕೊಡಿಸಲು ಮೋದಿ 'ಸ್ನೇಹಿತ' ಷರೀಫ್ ಜತೆ ಮಾತನಾಡಲಿ: ತಿವಾರಿ

ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರ ವೀಸಾ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಮನಿಶ್ ತಿವಾರಿ ಅವರು, ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರ ವೀಸಾ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಮನಿಶ್ ತಿವಾರಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನಟನಿಗೆ ವೀಸಾ ಕೊಡಿಸಲು ತಮ್ಮ ಸ್ನೇಹಿತ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತನಾಡಲಿ ಎಂದು ಬುಧವಾರ ಟ್ವಿಟ್ ಮಾಡಿದ್ದಾರೆ.
'ಭಾರತ ಸಹಿಷ್ಣುತಾ ದೇಶ ಎಂದು ಪ್ರಚಾರ ಮಾಡುತ್ತಿರುವ ಖೇರ್ ಅವರು ಪಾಕಿಸ್ತಾನಕ್ಕೆ ತೆರಳಲು ಉತ್ಸುಕರಾಗಿದ್ದರೆ, ಪ್ರಧಾನಿ ಮೋದಿ ಅವರು ತಮ್ಮ ಸ್ನೇಹಿತನಿಗೆ ವೀಸಾ ಕೊಡಿಸಲು ಮತ್ತೊಬ್ಬ ಸ್ನೇಹಿತ ನವಾಜ್ ಷರೀಫ್ ಅವರೊಂದಿಗೆ ಖಂಡಿತ ಮಾತನಾಡಿಬೇಕು' ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.
ಅನುಪಮ್ ಖೇರ್ ಅವರು ಫೆಬ್ರವರಿ 5ರಿಂದ ಕರಾಚಿಯಲ್ಲಿ ಆರಂಭವಾಗಲಿರುವ ನಾಲ್ಕು ದಿನಗಳ ಸಾಹಿತ್ಯ ಉತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಬೇಕಾಗಿತ್ತು. ಆದರೆ ಪಾಕಿಸ್ತಾನ ಅವರಿಗೆ ವೀಸಾ ನೀಡಲು ನಿರಾಕರಿಸಿದೆ.
ಇದಕ್ಕೂ ಮುನ್ನ ಕಾಶ್ಮೀರ ಪಂಡಿತರ ಬಗ್ಗೆ ಅನುಪಮ್ ಖೇರ್ ಅವರ ಹೇಳಿಕೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಪರವಾದ ಅವರ ನಿಲುವು ಪಾಕ್ ವೀಸಾ ನಿರಾಕರಿಸಲು ಕಾರಣವಾಗಿರಬಹುದು ಎಂದು ತಿವಾರಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್ ಜನರು ಅನಕ್ಷರಸ್ಥರು.. ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

IPL 2026: ರೋಹಿತ್ ಶರ್ಮಾ ದಾಖಲೆ ಧೂಳಿಪಟ ಮಾಡಿದ Virat Kohli; ಮತ್ತೆ ನಂಬರ್ 1 ಪಟ್ಟ!

IPL 2026: ಕೊನೆಗೂ ಗೆದ್ರಲ್ಲಪ್ಪಾ..; SRH ವಿರುದ್ಧ LSG ಭರ್ಜರಿ ಜಯ; ಮೈದಾನದಲ್ಲೇ Rishabh Pant ಬಿಗಿದಪ್ಪಿದ Sanjiv Goenka

SCROLL FOR NEXT