ಆಧ್ಯಾತ್ಮಿಕ ಚಿಂತಕ ರವಿಶಂಕರ್ 
ದೇಶ

ನೊಬೆಲ್ ಶಾಂತಿ ಪುರಸ್ಕಾರ ಸ್ಪರ್ಧಿಗಳ ಪೈಕಿ ರವಿಶಂಕರ್ ಗುರೂಜಿ?

ಈ ವರ್ಷದ ನೊಬೆಲ್ ಶಾಂತಿ ಪುರಸ್ಕಾರ ಸ್ಪರ್ಧಿಗಳ ಪಟ್ಟಿಯಲ್ಲಿ ಆರ್ಟ್ ಆಫ್ ಲಿವಿಂಗ್ ನ ಸಂಸ್ಥಾಪಕ ರವಿಶಂಕರ್ ಗುರೂಜಿ ಅವರ ಹೆಸರು ಕಾಣಿಸಿಕೊಂಡಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ನವದೆಹಲಿ: ಈ ವರ್ಷದ ನೊಬೆಲ್ ಶಾಂತಿ ಪುರಸ್ಕಾರ ಸ್ಪರ್ಧಿಗಳ ಪಟ್ಟಿಯಲ್ಲಿ ಆರ್ಟ್ ಆಫ್ ಲಿವಿಂಗ್ ನ ಸಂಸ್ಥಾಪಕ ರವಿಶಂಕರ್ ಗುರೂಜಿ ಅವರ ಹೆಸರು ಕಾಣಿಸಿಕೊಂಡಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.
ಥಾಮ್ಸನ್ ರಾಯಟರ್ಸ್ ಬ್ಲಾಗ್ ನಲ್ಲಿ ಬಂದಿರುವ ವಿಶ್ಲೇಷಣೆಯನ್ನು ಉಲ್ಲೇಖಿಸಿರುವ ಹಿಂದೂಸ್ಥಾನ್ ಟೈಮ್ಸ್, ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರ ಸ್ಪರ್ಧಿಗಳ ಪಟ್ಟಿಯಲ್ಲಿ ರವಿಶಂಕರ್ ಗುರೂಜಿ ಅವರ ಹೆಸರೂ ಸೇರಿದೆ ಎಂದು ಹೇಳಿದೆ. ನಾರ್ವೇಜಿಯನ್ ನೊಬೆಲ್ ಇನ್ಸ್ಟಿಟ್ಯೂಟ್ ನೊಬೆಲ್ ಶಾಂತಿ ಪುರಸ್ಕಾರಕ್ಕಾಗಿ ನಾಮ ನಿರ್ದೇಶನಗೊಂದವರ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲವಾದರೂ, ನೊಬೆಲ್ ವೀಕ್ಷಕರು ಯುಎಸ್ ಗುಪ್ತಚರ ಇಲಾಖೆ  ಬೇಹುಗಾರಿಕೆಯನ್ನು ಬಯಲಿಗೆಳೆದಿದ್ದ ಎಡ್ವರ್ಡ್ ಸ್ನೋಡೆನ್ ಹಾಗೂ ಕೊಲಂಬಿಯಾದಲ್ಲಿ ಶಾಂತಿ ನೆಲೆಸಲು ಸಂಧಾನಕಾರಾಗಿದ್ದವರನ್ನು ನಾಮನಿರ್ದೇಶನ ಮಾಡಿದ್ದಾರೆ ಎಂದು ಹೇಳಲಾಗಿದೆ.
ಕೊಲಂಬಿಯಾದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಭಾರತದ ಆಧ್ಯಾತ್ಮಿಕ ಚಿಂತಕ ರವಿಶಂಕರ್ ಪ್ರಮುಖ ಪಾತ್ರ ವಹಿಸಿದ್ದರು. 2015 ರಲ್ಲಿ ಕ್ಯೂಬಾ ಗೆ ಭೇಟಿ ನೀಡಿದ್ದ ವೇಳೆ, ಎಫ್ಎಆರ್‌ಸಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದ  ರವಿಶಂಕರ್‌ ಕೊಲಂಬಿಯಾ ಸರ್ಕಾರ ಮತ್ತು ಎಡ ಪಂಥೀಯ ಬಂಡುಕೋರರ ನಡುವಿನ ವಿಷಮ ಪರಿಸ್ಥಿತಿಯನ್ನು ನಿವಾರಿಸುವುದಕ್ಕೆ ನೆರವು ನೀಡಿದ್ದರು. ರವಿಶಂಕರ್ ಗುರೂಜಿ ಅವರ ನೆರವಿನಿಂದ ಕೊಲಂಬಿಯಾ ಸರ್ಕಾರ ಮತ್ತು ಗೆರಿಲ್ಲಾ ಪಡೆ ಎಫ್ಎಆರ್‌ಸಿ ನಡುವೆ ಕದನ ವಿರಾಮಕ್ಕೆ ಒಪ್ಪಂದವಾಗಿತ್ತು. ರವಿಶಂಕರ್ ಅವರೊಂದಿಗಿನ ಮಾತುಕತೆಯಲ್ಲಿ ಎಫ್ಎಆರ್‌ಸಿ ನಾಯಕರು ಗಾಂಧಿ ಅವರ ಅಹಿಂಸಾ ನೀತಿಗೆ ಒಪ್ಪಿ, ರಾಜಕೀಯ ಮಾರ್ಗದಲ್ಲಿ ಬೇಡಿಕೆ ಈಡೇರಿಕೆಗೆ ಯತ್ನಿಸುವುದಾಗಿ ಹೇಳಿದ್ದರು.
ಕೊಲಂಬಿಯಾದಲ್ಲಿ ಶಾಂತಿ ನೆಲೆಸುವುದಕ್ಕೆ ನೆರವು ನೀಡಿದ್ದನ್ನು ಪರಿಗಣಿಸಿ  ನೊಬೆಲ್ ಶಾಂತಿ ಪುರಸ್ಕಾರ ಸ್ಪರ್ಧಿಗಳ ಪಟ್ಟಿಯಲ್ಲಿ ರವಿಶಂಕರ್ ಅವರ ಹೆಸರೂ ಕಾಣಿಸಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.   

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT