ಸರಿತಾ ನಾಯರ್ 
ದೇಶ

ಕೇರಳ ಸಿಎಂ ಚಾಂಡಿ ಲಂಚ ಹಗರಣ ಬಹಿರಂಗ ಪಡಿಸಿದ ಸರಿತಾಗೆ ಜೀವ ಬೆದರಿಕೆ

ಸೋಲಾರ್ ಲಂಚ ಹಗರಣಲ್ಲಿ ಕೇರಳದ ಮುಖ್ಯಮಂತ್ರಿ ಉಮನ್ ಚಾಂಡಿ ಭಾಗಿಯಾಗಿದ್ದಾರೆ...

ಕೊಯಂಬತ್ತೂರ್: ಸೋಲಾರ್ ಲಂಚ ಹಗರಣಲ್ಲಿ ಕೇರಳದ ಮುಖ್ಯಮಂತ್ರಿ ಉಮನ್ ಚಾಂಡಿ ಭಾಗಿಯಾಗಿದ್ದಾರೆ ಎಂದು ಹೇಳಿದಾಗಿನಿಂದಲೂ ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸೋಲಾರ ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ ಹೇಳಿದ್ದಾರೆ. 
ಮುಖ್ಯಮಂತ್ರಿ ಉಮನ್ ಚಾಂಡಿಯವರಿಗೆ ರು.1.90 ಕೋಟಿ ಲಂಚ ನೀಡಿರುವುದಾಗಿ ಹೇಳಿಕೆ ನೀಡಿದಾಗಿನಿಂದಲೂ ನನಗೆ ಪ್ರತಿನಿತ್ಯ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಸರಿತಾ ತಿಳಿಸಿದ್ದಾರೆ. 
ಸೋಲಾರ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸರಿತಾ ನಾಯರ್, ಮುಖ್ಯಮಂತ್ರಿ ಉಮನ್ ಚಾಂಡಿಯವರಿಗೆ ರು.1.90 ಕೋಟಿ ಲಂಚ ನೀಡಿರುವುದಾಗಿ ಹೇಳಿದ್ದರು. ಈ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದ ತ್ರಿಶೂರ್ ವಿಜಿಲೆನ್ಸ್ ಕೋರ್ಟ್, ಉಮನ್ ಚಾಂಡಿ ಹಾಗೂ ಇಂದನ ಸಚಿವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸೂಚನೆ ನೀಡಿತ್ತು. 
ಸೋಲಾರ ಯೋಜನೆಗಾಗಿ ಅನುಮತಿ ಪಡೆಯಲು ತಮ್ಮ ಸಹದ್ಯೋಗಿಯೊಬ್ಬರು ಸಿಎಂ ಉಮನ್ ಚಾಂಡಿಗೆ ಲಂಚ ನೀಡಿದ್ದರು. ಚಾಂಡಿಯವರ ಆಪ್ತ ಕಾರ್ಯದರ್ಶಿ ಚಿಕ್ಕುಮೊನ್ ಜಾಕೋಬ್ 7 ಕೋಟಿ ರುಪಾಯಿಗಳ ಲಂಚದ ಬೇಡಿಕೆ ಇಟ್ಟಿದ್ದರು. ಅದಲ್ಲದೇ, ವಿದ್ಯುತ್ ಖಾತೆ ಸಚಿವ ಆರ್ಯದಾನ್ ಮುಹಮ್ಮದ್ ಅವರಿಗೆ ಅವರ ಕಾರ್ಯದರ್ಶಿ ಕೇಶವನ್ ರು.80 ಲಕ್ಷ ಲಂಚವಾಗಿ ಸ್ವೀಕರಿಸಿದ್ದರು ಎಂದು ಸರಿತಾ ತನಿಖಾ ಆಯೋಗಕ್ಕೆ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT