ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರಿನ ಚಿತ್ರ 
ದೇಶ

ಹಾಸ್ಯ ನಟ ಮದುರೈ ಮುತ್ತು ಪತ್ನಿ ಅಪಘಾತದಲ್ಲಿ ನಿಧನ

ತಮ್ಮ ಹಾಸ್ಯದ ಮೂಲಕವೇ ತಮಿಳುನಾಡಿನಾದ್ಯಂತ ಹೆಸರು ಮಾಡಿದ್ದ ಹಾಸ್ಯ ನಟ ಮದುರೈ ಮುತ್ತು ಅವರ ಪತ್ನಿ ವೈಯಮ್ಮಳ್(32) ಅಪಘಾತವೊಂದರಲ್ಲಿ ಸಾವನ್ನಪ್ಪಿರುವ ಘಟನೆ ಕೊಟ್ಟೈಯಿರುಪ್ಪು ಪ್ರದೇಶದಲ್ಲಿ ಗುರುವಾರ ನಡೆದಿದೆ...

ಶಿವಗಂಗಾ: ತಮ್ಮ ಹಾಸ್ಯದ ಮೂಲಕವೇ ತಮಿಳುನಾಡಿನಾದ್ಯಂತ ಹೆಸರು  ಮಾಡಿದ್ದ ಹಾಸ್ಯ ನಟ ಮದುರೈ ಮುತ್ತು ಅವರ ಪತ್ನಿ ವೈಯಮ್ಮಳ್(32) ಅಪಘಾತವೊಂದರಲ್ಲಿ ಸಾವನ್ನಪ್ಪಿರುವ ಘಟನೆ ಕೊಟ್ಟೈಯಿರುಪ್ಪು ಪ್ರದೇಶದಲ್ಲಿ ಗುರುವಾರ ನಡೆದಿದೆ.

ನಿನ್ನೆ ಬೆಳಿಗ್ಗೆ ವೈಯಮ್ಮಳ್ ಅವರು ತಮ್ಮ ಕಾರು ಚಾಲಕನೊಂದಿಗೆ ಶಿವಗಂಗಾ ಜಿಲ್ಲೆಯಲ್ಲಿರುವ ತಿರುಪ್ಪತೂರಿನ ಪಿಲ್ಲಿಯಾರ್ಪತ್ತಿ ದೇವಸ್ಥಾನಕ್ಕೆ ಹೋಗುತ್ತಿದ್ದರು. ಈ ವೇಳೆ ಕಾರು ಕೊಟ್ಟೈಯಿರುಪ್ಪು ಪ್ರದೇಶಕ್ಕೆ ಹೋಗುತ್ತಿರುವಾಗ ಕಾರಿನ ಹಿಂಭಾಗದ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಚಾಲಕ ಕಾರಿನ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ನಂತರ ಕಾರು ರಸ್ತೆಯ ಬಳಿಯಿದ್ದ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವೈಯಮ್ಮಳ್ ಅವರು ತೀವ್ರವಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ಕೂಡ ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಆತನನ್ನು ತಿರುಪ್ಪತ್ತೂರಿನಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಆತನ ಸ್ಥಿತಿ ಚಿಂತಾಜನಕವಾಗಿರುವ ಹಿನ್ನೆಲೆಯಲ್ಲಿ ಮದುರೈ ನ ಜಿಆರ್ ಹೆಚ್ ಆಸ್ಪತ್ರೆಗೆ ದಾಖಲು ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಮೂಲಗಳ ಪ್ರಕಾರ ವೈಯಮ್ಮಳ್ ಅವರ ಪತಿ ಹಾಸ್ಯ ನಟ ಮುತ್ತು ಅವರು ಕಾರ್ಯಕ್ರಮವೊಂದಕ್ಕೆ ಭೇಟಿ ನೀಡುವ ಸಲುವಾಗಿ ವಿದೇಶಕ್ಕೆ ಹೋಗಿದ್ದರು. ತಮ್ಮ ಪತ್ನಿ ನಿಧನದ ವಾರ್ತೆ ತಿಳಿಯುತ್ತಿದ್ದಂತೆ ಮುತ್ತು ಅವರು ಕಾರ್ಯಕ್ರಮವನ್ನು ರದ್ದು ಮಾಡಿ ಮದುರೈಗೆ ಹಿಂತಿರುಗಿ ಬಂದಿದ್ದಾರೆಂದು  ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT