ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್(ಸಂಗ್ರಹ ಚಿತ್ರ) 
ದೇಶ

ಮುಲಾಯಂಗಾಗಿ ಅಯೋಧ್ಯೆಯಲ್ಲಿ ನಡೆದ 77 ದಿನಗಳ ಯಜ್ಞ ಅಂತ್ಯ

ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ಹುಟ್ಟುಹಬ್ಬದ ಪ್ರಯುಕ್ತ ಅಯೋಧ್ಯೆಯಲ್ಲಿ ನಡೆದ 77 ದಿನಗಳ ಯಜ್ಞ ಶನಿವಾರ ಅಂತ್ಯಗೊಂಡಿದೆ...

ಅಯೋಧ್ಯೆ: ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅಯೋಧ್ಯೆಯಲ್ಲಿ ನಡೆದ 77 ದಿನಗಳ ಯಜ್ಞ ಶನಿವಾರ ಅಂತ್ಯಗೊಂಡಿದೆ.

76ನೇ ವರ್ಷದ ಹುಟ್ಟುಹಬ್ಬಕ್ಕಾಗಿ ಮುಲಾಯಂ ಸಿಂಗ್ ಅವರಿಗಾಗಿ ಅಯೋಧ್ಯೆಯ ಶ್ರೀಕೃಷ್ಣ ಗೋಶಾಲೆಯಲ್ಲಿ ಯಜ್ಞವೊಂದನ್ನು ಆಯೋಜಿಸಲಾಗಿತ್ತು. ಈ ಯಜ್ಞ ಕಳೆದ ವರ್ಷ ನವೆಂಬರ್ 22ಕ್ಕೆ ಆರಂಭವಾಗಿತ್ತು. 77 ದಿನಗಳ ಕಾಲ ನಡೆದ ಈ ಯಜ್ಞ ಇಂದು ಅಂತ್ಯಗೊಂಡಿದೆ.

ಈ ಕುರಿತಂತೆ ಮಾತನಾಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಜಯಶಂಕರ್ ಪಾಂಡೆ ಅವರು, ಮುಲಾಯಂ ಅವರ ಆರೋಗ್ಯ ಹಾಗೂ ಆಯಸ್ಸಿನ ವೃದ್ಧಿಗಾಗಿ ಈ ಯಜ್ಞವನ್ನು ಆಯೋಜಿಸಲಾಗಿತ್ತು ಎಂದು ಹೇಳಿದ್ದಾರೆ. ಮುಲಾಯಂ ಸಿಂಗ್ ಗಾಗಿ ಆಯೋಜಿಸಿದ್ದ ಈ ಯಜ್ಞಕ್ಕೆ ವಿಶ್ವ ಹಿಂದೂ ಪರಿಷತ್ ಸಂಘಟನೆ ಈ ಹಿಂದೆ ವಿರೋಧ ವ್ಯಕ್ತಪಡಿಸಿತ್ತು. ಯಜ್ಞವನ್ನು ರದ್ದು ಮಾಡುವಂತೆ ಆಗ್ರಹಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT