ಸಾಂದರ್ಭಿಕ ಚಿತ್ರ 
ದೇಶ

ಶಬರಿಮಲೆಗೆ ಮಹಿಳೆಯರಿಗೆ ನಿರ್ಬಂಧ: ಸಮರ್ಥಿಸಿಕೊಂಡ ಕೇರಳ ಸರ್ಕಾರ

ಶಬರಿಮಲೆ ಅಯ್ಯಪ್ಪ ದೇವಸ್ಥಾನ ಪ್ರವೇಶಕ್ಕೆ ಮಹಿಳೆಯರಿಗೆ ಹೇರಲಾಗಿರುವ ನಿರ್ಬಂಧವನ್ನು ಕೇರಳ ಸರ್ಕಾರ ಸಮರ್ಥಿಸಿ...

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇವಸ್ಥಾನ ಪ್ರವೇಶಕ್ಕೆ ಮಹಿಳೆಯರಿಗೆ ಹೇರಲಾಗಿರುವ ನಿರ್ಬಂಧವನ್ನು ಕೇರಳ ಸರ್ಕಾರ ಸಮರ್ಥಿಸಿಕೊಂಡಿದೆ.
ನ್ಯಾಯಾಂಗ ಪ್ರಕ್ರಿಯೆಯಿಂದ ಭಕ್ತಾದಿಗಳ ನಂಬಿಕೆ ಮತ್ತು ಪದ್ಥತಿಗಳನ್ನು ಬದಲಿಸಲು ಸಾಧ್ಯವಿಲ್ಲ. ಅಲ್ಲದೇ, ದೇವಾಲಯದ ಅರ್ಚಕರ ತೀರ್ಮಾನವೇ ಅಂತಿಮ ಎಂದು ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದೆ.
ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಾಲಯ ಪ್ರವೇಶಿಸಲು ಮಹಿಳೆಯರಿಗೆ ನಿಷೇಧ ಯಾಕೆ ಎಂದು ಸುಪ್ರೀಂ ಕೋರ್ಟ್ ಕೇರಳ ಸರ್ಕಾರವನ್ನು ಪ್ರಶ್ನಿಸಿತ್ತು. ದೇವಾಲಯ ಪ್ರವೇಶಕ್ಕೆ ನಿಷೇಧಿಸುವ ಕ್ರಮ ಸಂವಿಧಾನ ರೀತಿಯಲ್ಲಿ ಸರಿಯಲ್ಲ. ಧರ್ಮದ ಕಾರಣವನ್ನು ನೀಡಿ ಮಹಿಳೆಯರು ದೇವಾಲಯವನ್ನು ಪ್ರವೇಶಿಸದೇ ಇರುವುದು ಸರಿಯೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿತ್ತು.
ಇಂಡಿಯನ್ ಯಂಗ್ ಲಾಯರ್ಸ್ ಸಂಘಟನೆಯ ಸದಸ್ಯರು ಸಲ್ಲಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನಡೆಸಿದ ಕೋರ್ಟ್ ಈ ವಿಚಾರದ ಬಗ್ಗೆ ಅಫಿಡವಿಟ್ ಸಲ್ಲಿಸುಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಅಫಿಡವಿಟ್ ಸಲ್ಲಿಸಿದ ಕೇರಳ ಸರ್ಕಾರ ಮಹಿಳೆಯರಿಗೆ ಹೇರಲಾಗಿರುವ ನಿರ್ಬಂಧವನ್ನು ಸಮರ್ಥಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ.26ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ. ಹೆಚ್ಚಳ!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿ ಮ್ಯಾಜಿಕ್; ಅಘಾಡಿ ಗಾಡಿ ಪಂಕ್ಚರ್!

Pakistan: 17 ವರ್ಷ ಜೈಲು ಶಿಕ್ಷೆ ಹಿನ್ನೆಲೆ, ದೇಶಾದ್ಯಂತ ಬೀದಿಗಿಳಿದು ಹೋರಾಟಕ್ಕೆ ಸಜ್ಜಾಗಿ, ಇಮ್ರಾನ್ ಖಾನ್ ಕರೆ!

ಬೆಂಗಳೂರು: ರಾಷ್ಟ್ರೀಯ 'ಪಲ್ಸ್ ಪೋಲಿಯೊ ಲಸಿಕಾ' ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದಲ್ಲಿ 'ಸೀಸನಲ್ ಫ್ಲೂ' ಹೆಚ್ಚಳ ಹಿನ್ನೆಲೆ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ!

SCROLL FOR NEXT