ಸ್ಪೋಟ ಸಂಭವಿಸಿದ ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ದಳದ ಪರಿಶೀಲನೆ 
ದೇಶ

ಉಲ್ಕಾಪಾತದಿಂದ ಬಸ್ ಚಾಲಕ ಸಾವು!

ತಮಿಳುನಾಡಿನ ವೆಲ್ಲೂರಿನ ಇಂಜಿನಿಯರಿಂಗ್ ಕಾಲೇಜ್ ನ ಬಸ್ ಚಾಲಕನೊಬ್ಬ ಉಲ್ಕಾಪಾತಕ್ಕೆ ಬಲಿಯಾಗಿದ್ದಾರೆ.

ವೆಲ್ಲೂರು: ತಮಿಳುನಾಡಿನ ವೆಲ್ಲೂರಿನ ಇಂಜಿನಿಯರಿಂಗ್ ಕಾಲೇಜ್ ನ ಬಸ್ ಚಾಲಕನೊಬ್ಬ ಉಲ್ಕಾಪಾತಕ್ಕೆ ಬಲಿಯಾಗಿದ್ದಾರೆ. ನಟ್ರಂಪಲ್ಲಿಯಲ್ಲಿರುವ ಇಂಜಿನಿಯರಿಂಗ್ ಕಾಲೇಜಿನ ಬಸ್ ಚಾಲಕ ಕಾಮರಾಜ್ ಉಲ್ಕಾಪಾತಕ್ಕೆ ಸಿಲುಕಿ ಮೃತಪಟ್ಟಿರುವ ವ್ಯಕ್ತಿ.
ಮೃತರ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ 1 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಕಾಲೇಜಿನ ಅವರಣದಲ್ಲೇ ಉಲ್ಕಾಪಾತವಾಗಿದ್ದು, ಪ್ರಾರಂಭದಲ್ಲಿ ಜೆಲಟಿನ್ ತುಂಡುಗಳಿಂದ ಸ್ಫೋಟ ಸಂಭವಿಸಿ ಈ ದುರ್ಘಟನೆ ಸಂಭವಿಸರಬಹುದು ಎಂದು ಊಹಿಸಲಾಗಿತ್ತು. ಕಾಲೇಜಿನಲ್ಲಿರುವ ಉದ್ಯಾನ ಪಾಲಕರಾಗಿದ್ದ ಶಶಿ ಕುಮಾರ್ ಹಾಗೂ ಮುರುಳಿ ಕಸಕ್ಕೆ ಬೆಂಕಿ ಹಚ್ಚುವಾಗ, ಕಾಲೇಜು ಕಟ್ಟಡ ನಿರ್ಮಾಣದ ವೇಳೆ ಬಳಕೆಯಾಗದೇ ಉಳಿದಿದ್ದ ಜೆಲಟಿನ್ ತುಂಡುಗಳಿಗೂ ಅಜಾಗರೂಕತೆಯಿಂದ ಬೆಂಕಿ ಹಚ್ಚಿದ್ದಾರೆ ಪರಿಣಾಮ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿತ್ತು. ಆದರೆ ಪ್ರತ್ಯಕ್ಷದರ್ಶಿಗಳು ಸ್ಫೋಟ ಸಂಭವಿಸುವ ವೇಳೆ ಆಕಾಶದಿಂದ ನಿಗೂಢ ವಸ್ತುವೊಂದು ಬಿದ್ದಿರುವುದನ್ನು ಕಂಡಿದ್ದಾಗಿ ಹೇಳಿದ್ದಾರೆ.
ಈ ಬಗ್ಗೆ ತನಿಖೆ ನಡೆಸಲಾಗಿದ್ದು, ಉಲ್ಕಾಪಾತದಿಂದ ಚಾಲಕನ ಸಾವು ಸಂಭವಿಸಿರುವುದು ಸ್ಪಷ್ಟವಾಗಿದೆ. ಸಾಮಾನ್ಯವಾಗಿ ಉಲ್ಕೆಗಳು ಭೂಮಿಯ ಕಕ್ಷೆ ತಲುಪುವ ವೇಳೆಗೆ ಉರಿದು ಬೂದಿಯಾಗಿರುತ್ತವೆ. ಆದರೆ ಕೆಲವೊಮ್ಮೆ ಉಲ್ಕೆಗಳು ಪರಿಣಾಮಕಾರಿಯಾಗಿರುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT