ಶಾಮ್ಲಿ ಘಟನೆ: ಅಖಿಲೇಶ್ ಸರ್ಕಾರದ ವಿರುದ್ಧ ಕಿಡಿಕಾರಿದ ಬಿಜೆಪಿ 
ದೇಶ

ಶಾಮ್ಲಿ ಘಟನೆ: ಅಖಿಲೇಶ್ ಸರ್ಕಾರದ ವಿರುದ್ಧ ಕಿಡಿಕಾರಿದ ಬಿಜೆಪಿ

ಚುನಾವಣಾ ಗೆಲುವಿನ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡಿನಿಂದ ಬಾಲಕ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅಖಿಲೇಖ್ ಯಾದವ್ ಅವರ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರ ಕಿಡಿಕಾರಿದ್ದು, ಸಮಾಜವಾದಿ ಪಕ್ಷವನ್ನು ಗೂಂಡಾ ಪಕ್ಷವೆಂದು ಕರೆದಿದೆ...

ನವದೆಹಲಿ: ಚುನಾವಣಾ ಗೆಲುವಿನ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡಿನಿಂದ ಬಾಲಕ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅಖಿಲೇಖ್ ಯಾದವ್ ಅವರ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರ ಕಿಡಿಕಾರಿದ್ದು, ಸಮಾಜವಾದಿ ಪಕ್ಷವನ್ನು ಗೂಂಡಾ ಪಕ್ಷವೆಂದು ಕರೆದಿದೆ.

ರಾಜ್ಯದಲ್ಲಿ ಗೂಂಡಾಗಳು ಅಧಿಕಾರ ನಡೆಸಿದರೆ ಈ ರೀತಿಯ ಘಟನೆಗಳು ನಡೆಯುತ್ತಿರುತ್ತವೆ. ಸಮಾಜವಾದಿ ಪಕ್ಷವೊಂದು ಗೂಂಡಾ ಪಕ್ಷ. ಹಾಗಾಗಿಯೇ ಅವರು ಗೆದ್ದಾದ ಗುಂಡುಗಳನ್ನು ಹಾರಿಸಿದ್ದಾರೆ. ಆದರೆ ಸಂಭ್ರಮದ ವೇಳೆ ಹಾರಿದ ಗುಂಡು ಬಾಲಕನ್ನು ಬಲಿತೆಗೆದುಕೊಂಡಿರುವುದು ನಿಜಕ್ಕೂ ದುರ್ಘಟನೆಯಾಗಿದೆ ಎಂದು ಹೇಳಿಕೊಂಡಿದೆ.

ಈ ಕುರಿತಂತೆ ಮಾತಾಡಿರುವ ಬಿಜೆಪಿ ನಾಯಕ ಸಿದ್ದಾರ್ಥ್ ನಾಥ್ ಸಿಂಗ್ ಅವರು, ಗುಂಡಾಗಳನ್ನು ನೋಡಿದಾಗ ಜಂಗಲ್ ರಾಜ್ ರಂತಹ ಫಲಿತಾಂಶ ಹೊರಬರುತ್ತದೆ. ಗೂಂಡಾಗಳ ಅಧಿಕಾರದಲ್ಲಿ ಅಮಾಯಕರು ಬಲಿಯಾಗುತ್ತಿದ್ದಾರೆ ಇದು ನಿಜಕ್ಕೂ ದುರ್ಘಟನೆಯಾಗಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ನಡೆದ ಪಂಚಾಯತ್ ಚುನಾವಣೆಯೊಂದರಲ್ಲಿ ನಫೀಸಾ ಎಂಬುವವರು ಗೆಲವು ಸಾಧಿಸಿದ್ದರು. ಹೀಗಾಗಿ ಅಲ್ಲಿನ ಆಡಳಿತಾರೂಢ ಸಮಾಜವಾದಿ ಪಕ್ಷದ ಕಾರ್ಯಕರ್ತರು ಗೆಲುವಿನ ಸಂಭ್ರಮಾಚರಣೆಯನ್ನು ಆಚರಿಸುತ್ತಿದ್ದರು. ಈ ವೇಳೆ ಕೈಯಲ್ಲಿದ್ದ ತಮ್ಮ ಬಂದೂಕುಗಳಿಂದ ಆಕಾಶದತ್ತ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದರು. ಆದರೆ ಸಂಭ್ರಮಾಚರಣೆ ವೇಳೆ ಹಾರಿದ ಗುಂಡೊಂದು 9ರ ಹರೆಯದ ಬಾಲಕನೊಬ್ಬನ ಎದೆಗೆ ಹಾರಿ ಆತನ ಪ್ರಾಣವನ್ನು ತೆಗೆದಿತ್ತು, 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT