ಶಾಮ್ಲಿ ಘಟನೆ: ಅಖಿಲೇಶ್ ಸರ್ಕಾರದ ವಿರುದ್ಧ ಕಿಡಿಕಾರಿದ ಬಿಜೆಪಿ 
ದೇಶ

ಶಾಮ್ಲಿ ಘಟನೆ: ಅಖಿಲೇಶ್ ಸರ್ಕಾರದ ವಿರುದ್ಧ ಕಿಡಿಕಾರಿದ ಬಿಜೆಪಿ

ಚುನಾವಣಾ ಗೆಲುವಿನ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡಿನಿಂದ ಬಾಲಕ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅಖಿಲೇಖ್ ಯಾದವ್ ಅವರ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರ ಕಿಡಿಕಾರಿದ್ದು, ಸಮಾಜವಾದಿ ಪಕ್ಷವನ್ನು ಗೂಂಡಾ ಪಕ್ಷವೆಂದು ಕರೆದಿದೆ...

ನವದೆಹಲಿ: ಚುನಾವಣಾ ಗೆಲುವಿನ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡಿನಿಂದ ಬಾಲಕ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅಖಿಲೇಖ್ ಯಾದವ್ ಅವರ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರ ಕಿಡಿಕಾರಿದ್ದು, ಸಮಾಜವಾದಿ ಪಕ್ಷವನ್ನು ಗೂಂಡಾ ಪಕ್ಷವೆಂದು ಕರೆದಿದೆ.

ರಾಜ್ಯದಲ್ಲಿ ಗೂಂಡಾಗಳು ಅಧಿಕಾರ ನಡೆಸಿದರೆ ಈ ರೀತಿಯ ಘಟನೆಗಳು ನಡೆಯುತ್ತಿರುತ್ತವೆ. ಸಮಾಜವಾದಿ ಪಕ್ಷವೊಂದು ಗೂಂಡಾ ಪಕ್ಷ. ಹಾಗಾಗಿಯೇ ಅವರು ಗೆದ್ದಾದ ಗುಂಡುಗಳನ್ನು ಹಾರಿಸಿದ್ದಾರೆ. ಆದರೆ ಸಂಭ್ರಮದ ವೇಳೆ ಹಾರಿದ ಗುಂಡು ಬಾಲಕನ್ನು ಬಲಿತೆಗೆದುಕೊಂಡಿರುವುದು ನಿಜಕ್ಕೂ ದುರ್ಘಟನೆಯಾಗಿದೆ ಎಂದು ಹೇಳಿಕೊಂಡಿದೆ.

ಈ ಕುರಿತಂತೆ ಮಾತಾಡಿರುವ ಬಿಜೆಪಿ ನಾಯಕ ಸಿದ್ದಾರ್ಥ್ ನಾಥ್ ಸಿಂಗ್ ಅವರು, ಗುಂಡಾಗಳನ್ನು ನೋಡಿದಾಗ ಜಂಗಲ್ ರಾಜ್ ರಂತಹ ಫಲಿತಾಂಶ ಹೊರಬರುತ್ತದೆ. ಗೂಂಡಾಗಳ ಅಧಿಕಾರದಲ್ಲಿ ಅಮಾಯಕರು ಬಲಿಯಾಗುತ್ತಿದ್ದಾರೆ ಇದು ನಿಜಕ್ಕೂ ದುರ್ಘಟನೆಯಾಗಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ನಡೆದ ಪಂಚಾಯತ್ ಚುನಾವಣೆಯೊಂದರಲ್ಲಿ ನಫೀಸಾ ಎಂಬುವವರು ಗೆಲವು ಸಾಧಿಸಿದ್ದರು. ಹೀಗಾಗಿ ಅಲ್ಲಿನ ಆಡಳಿತಾರೂಢ ಸಮಾಜವಾದಿ ಪಕ್ಷದ ಕಾರ್ಯಕರ್ತರು ಗೆಲುವಿನ ಸಂಭ್ರಮಾಚರಣೆಯನ್ನು ಆಚರಿಸುತ್ತಿದ್ದರು. ಈ ವೇಳೆ ಕೈಯಲ್ಲಿದ್ದ ತಮ್ಮ ಬಂದೂಕುಗಳಿಂದ ಆಕಾಶದತ್ತ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದರು. ಆದರೆ ಸಂಭ್ರಮಾಚರಣೆ ವೇಳೆ ಹಾರಿದ ಗುಂಡೊಂದು 9ರ ಹರೆಯದ ಬಾಲಕನೊಬ್ಬನ ಎದೆಗೆ ಹಾರಿ ಆತನ ಪ್ರಾಣವನ್ನು ತೆಗೆದಿತ್ತು, 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT