ದೆಹಲಿಯ ಬಿಜೆಪಿ ಕಚೇರಿಯ ಪಾರ್ಶ್ವನೋಟ 
ದೇಶ

''ಪಂಚಕಜ್ಜಾಯ''ದ ಕಡೆ ಬಿಜೆಪಿ ದೃಷ್ಟಿ

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳು ನಾಡು ಮತ್ತು ಪಾಂಡಿಚೆರಿ ಈ ಐದು ರಾಜ್ಯಗಳಲ್ಲಿ ಈ ವರ್ಷ ನಡೆಯಲಿರುವ ಚುನಾವಣೆಗೆ ಬಿಜೆಪಿ...

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪಾಂಡಿಚೆರಿ ಈ ಐದು ರಾಜ್ಯಗಳಲ್ಲಿ ಈ ವರ್ಷ ನಡೆಯಲಿರುವ ಚುನಾವಣೆಗೆ ಬಿಜೆಪಿ ಹೊಸ ರೀತಿಯಲ್ಲಿ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಕೇಂದ್ರ ಸಂಪುಟದ ಸಚಿವರು ರಾಜ್ಯಗಳ ಪಕ್ಷದ ವಕ್ತಾರರನ್ನು ಈ ಬಾರಿ ಹೆಚ್ಚು ಹುರಿದುಂಬಿಸಲಿದ್ದಾರೆ.

ದೆಹಲಿ ಮತ್ತು ಬಿಹಾರ ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತ ಬಳಿಕ ಮುಂಬರುವ ಚುನಾವಣೆಗಳಲ್ಲಾದರೂ ಗೆಲ್ಲಬೇಕೆಂಬುದು ಬಿಜೆಪಿಯ ಆಕಾಂಕ್ಷೆಯಾಗಿದೆ. ಅದಕ್ಕಾಗಿ ಕೇಂದ್ರದ ಸಚಿವರು ವಕ್ತಾರರನ್ನು ಭೇಟಿ ಮಾಡಿ ಪಕ್ಷದ ಪರ ಹೇಗೆ ಪ್ರಚಾರ ನಡೆಸಬೇಕು, ಬಿಜೆಪಿಯ ಆಶಯವೇನು, ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಎಂಬುದನ್ನು ಜನರಿಗೆ ಸೂಕ್ತವಾಗಿ ಮನವರಿಕೆ ಮಾಡಬೇಕೆಂದು ತಿಳಿಸಲಾಗಿದೆ. ಇದರ ನೇತೃತ್ವವನ್ನು ಬಿಜೆಪಿಯ ''ಉತ್ತಮ ಆಡಳಿತ ಘಟಕ'' ವಹಿಸಿದೆ.

ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಕಳೆದ ಒಂದು ವರ್ಷದಿಂದ ಪಕ್ಷದ ವಕ್ತಾರರೊಂದಿಗೆ ಈ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ. ಕಳೆದ ವರ್ಷ ಅವರು ಬಜೆಟ್ ಗೂ ಮುನ್ನ ಸಂಸತ್ತಿನಲ್ಲಿ ವಿರೋಧಪಕ್ಷಗಳು ಉಂಟು ಮಾಡುವ ಸಂದಿಗ್ಧ ಸನ್ನಿವೇಶಗಳನ್ನು ಸಮರ್ಥವಾಗಿ ನಿರ್ವಹಿಸುವ ಬಗ್ಗೆ ಚರ್ಚಿಸಿದ್ದಾರೆ.

ಪಕ್ಷದ ವಕ್ತಾರರು ಉತ್ತಮ ರೀತಿಯಲ್ಲಿ ತಯಾರಿ ನಡೆಸಿ ಪಕ್ಷವನ್ನು ಹೇಗೆ ಚುನಾವಣೆಯಲ್ಲಿ ಗೆಲ್ಲಿಸಬಹುದು ಎಂಬ ಬಗ್ಗೆ ಅಧ್ಯಯನ ನಡೆಸಬೇಕೆಂದು ಪ್ರಧಾನ ಮಂತ್ರಿ ಮೋದಿಯವರು ಕೂಡ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT