ಕಾಪು ಮುಖಂಡ ಮುದ್ರಗಡ ಪದ್ಮನಾಭಂ (ಸಂಗ್ರಹ ಚಿತ್ರ) 
ದೇಶ

ಕಾಪು ವಿವಾದ: ಉಪವಾಸ ಸತ್ಯಾಗ್ರಹ ಕೈ ಬಿಡಲಿರುವ ಮುದ್ರಗಡ ಪದ್ಮನಾಭಂ

ಕಾಪು ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂಬ ಆಗ್ರಹದೊಂದಿಗೆ ಮುದ್ರಗಡ ಪದ್ಮನಾಭಂ ಅವರು ಆರಂಭಿಸಿದ್ದ ಉಪವಾಸ ಸತ್ಯಾಗ್ರಹ ಅಂತ್ಯಗೊಳ್ಳುವ ಸಾಧ್ಯತೆ ಇದೆ...

ಅಮರಾವತಿ: ಕಾಪು ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂಬ ಆಗ್ರಹದೊಂದಿಗೆ ಮುದ್ರಗಡ ಪದ್ಮನಾಭಂ ಅವರು ಆರಂಭಿಸಿದ್ದ ಉಪವಾಸ ಸತ್ಯಾಗ್ರಹ ಅಂತ್ಯಗೊಳ್ಳುವ  ಸಾಧ್ಯತೆ ಇದೆ.

ನಿನ್ನೆಯಷ್ಟೇ ಅಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪದ್ಮನಾಭಂ ಅವರ ಪಶ್ಚಿಮ ಗೋದಾವರಿ ಜಿಲ್ಲೆಯ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದರು. ಅಲ್ಲದೆ ಪದ್ಮನಾಭಂ  ಅವರ ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಆಶ್ವಾಸನೆಯನ್ನು ನೀಡಿದ್ದರು ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪದ್ಮನಾಭಂ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು  ಕೈಬಿಡಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಚಂದ್ರಬಾಬು ಭೇಟಿ ಬಳಿಕ ಆಡಳಿತಾರೂಢ ಟಿಡಿಪಿ ಪಕ್ಷದ ಶಾಸಕ ಬೊಡ್ಡು ಭಾಸ್ಕರ ರಾಮಾರಾವ್ ಮತ್ತು ತೋಟಾ ತ್ರಿಮೂರ್ತುಲು ಅವರು ಪದ್ಮನಾಭಂ ಅವರ ನಿವಾಸಕ್ಕೆ ಆಗಮಿಸಿ  ಚರ್ಚಿಸಿದ್ದರು. ಭೇಟಿ ಬಳಿಕ ಕೆಲವೇ ಸಮಯದಲ್ಲಿ ಪದ್ಮನಾಭಂ ಅವರ ನಿವಾಸದ ಸುತ್ತಮುತ್ತ ಏರ್ಪಡಿಸಲಾಗಿದ್ದ ಬಿಗಿ ಪೊಲೀಸ್ ಭದ್ರತೆಯನ್ನು ಸಡಿಲಗೊಳಿಸಲಾಗಿದೆ. ಇನ್ನು ಮೂಲಗಳು  ತಿಳಿಸಿರುವಂತೆ ಕಾಪು ಸಮುದಾಯ ಅಭಿವೃದ್ಧಿಗಾಗಿ ಆಂಧ್ರ ಸರ್ಕಾರ ಉದ್ದೇಶಿಸಿರುವ ಕಾಪು ಅಭಿವೃದ್ಧಿ ಸಮಿತಿಗೆ ರುದ್ರಗಡ ಪದ್ಮನಾಭಂ ಅವರನ್ನು ನಾಮನಿರ್ದೇಶನ ಮಾಡುವ ಕುರಿತು ಈ  ಇಬ್ಬರು ನಾಯಕರು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ನಡೆದ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬೊಡ್ಡು ಭಾಸ್ಕರ ರಾಮಾರಾವ್ ಮತ್ತು ತೋಟಾ ತ್ರಿಮೂರ್ತುಲು ಅವರು, ಪದ್ಮನಾಭಂ ಅವರ ಬೇಡಿಕೆಗಳಿಗೆ  ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂಧಿಸಿದೆ. ಶೀಘ್ರದಲ್ಲಿಯೇ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಕೈ ಬಿಡುವ ವಿಶ್ವಾಸವಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ