ಆಂಟನಿ ವರ್ಘೀಸ್ 
ದೇಶ

ನೀರಿನಲ್ಲಿ ಮುಳುಗಿದ್ದ ಕಾರ್ಮಿಕರನ್ನು ರಕ್ಷಿಸಲು ಹೋಗಿ ತನ್ನ ಪ್ರಾಣವನ್ನೂ ಕಳೆದುಕೊಂಡ!

ನೀರಿನಲ್ಲಿ ಮುಳುಗುತ್ತಿದ್ದ ವಲಸಿಗ ಕಾರ್ಮಿಕರನ್ನು ರಕ್ಷಿಸಲು ಹೋದ ವ್ಯಕ್ತಿ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಕೊಟ್ಟಾಯಂ ನಲ್ಲಿ ನಡೆದಿದೆ.

ಕೊಟ್ಟಾಯಂ: ನೀರಿನಲ್ಲಿ ಮುಳುಗುತ್ತಿದ್ದ ವಲಸಿಗ ಕಾರ್ಮಿಕರನ್ನು ರಕ್ಷಿಸಲು ಹೋದ ವ್ಯಕ್ತಿ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಕೊಟ್ಟಾಯಂ ನಲ್ಲಿ ನಡೆದಿದೆ.

ನೆರೆ ಮನೆಯವರ ಬಾವಿಯನ್ನು ಸ್ವಚ್ಛಗೊಳಿಸಲು ಬಂದಿದ್ದ ಪಶ್ಚಿಮ ಬಂಗಾಳದ ಮುಗಥಾರ್ ಹಾಗೂ ಜಗಂಗೀರ್ 36 ರಿಂಗ್ ಗಳಷ್ಟು ಆಳವಿರುವ ಬಾವಿಯಲಿ ಮುಳುಗಿ ಪ್ರಾಣಾಪಾಯಕ್ಕೆ ಸಿಲುಕಿ, ಸಹಾಯಕ್ಕಾಗಿ ಕೂಗುತ್ತಿದ್ದದ್ದು ಆಂಟನಿ ವರ್ಘೀಸ್ ಗೆ ಕೇಳಿಸಿದೆ. ತಕ್ಷಣವೆ ಎಚ್ಚೆತ್ತುಕೊಂಡ ಆಂಟನಿ ತನಗೆ ಎದುರಾಗಬಹುದಾದ ಆಪತ್ತನ್ನೂ ಲೆಕ್ಕಿಸದೇ ಬಾವಿಗೆ ಜಿಗಿದು ಕಾರ್ಮಿಕರ ಪ್ರಾಣ ರಕ್ಷಿಸಲು ಮುಂದಾಗಿದ್ದಾರೆ.

ಆದರೆ ಕಾರ್ಮಿಕರನ್ನು ರಕ್ಷಿಸಲು ಹೋದ ಆಂಟನಿಯೂ ಸೇರಿದಂತೆ ಮೂರೂ ಜನರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ನೀರಿನಲ್ಲಿ ಮುಳುಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಚಿಂಗವನಂ ಪೊಲೀಸರು ಹಾಗೂ   ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬಾವಿಯಲ್ಲಿ ಸಿಲುಕಿಕೊಂಡಿದ್ದವರನ್ನು ಹತ್ತಿರದಲ್ಲೇ ಇದ್ದ ಚಂಗನಸ್ಸೆರಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಮೂವರೂ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT