ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿರುವುದು (ಕೃಪೆ: ಟ್ವಿಟರ್ ) 
ದೇಶ

ಸಂಭ್ರಮಾಚರಣೆ ವೇಳೆ ಗುಂಡು ಹಾರಾಟ; ಆ ಗುಂಡು ಬಾಲಕನ ಪ್ರಾಣವನ್ನೇ ಕಸಿಯಿತು!

ಉತ್ತರ ಪ್ರದೇಶದ ಆಡಳಿತಾರೂಢ ಸಮಾಜವಾದಿ ಪಕ್ಷದ ಕಾರ್ಯಕರ್ತರು ಸ್ಥಳೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿ ಆಕಾಶದತ್ತ ಗುಂಡು ಹಾರಿಸಿ ಸಂಭ್ರಮಾಚರಣೆ...

ಶಾಮ್ಲಿ: ಉತ್ತರ ಪ್ರದೇಶದ ಆಡಳಿತಾರೂಢ ಸಮಾಜವಾದಿ ಪಕ್ಷದ ಕಾರ್ಯಕರ್ತರು ಸ್ಥಳೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿ ಆಕಾಶದತ್ತ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದು,ಈ ವೇಳೆ ಗುಂಡು ತಾಗಿ 9ರ ಹರೆಯದ ಬಾಲಕನೊಬ್ಬ ಸಾವಿಗೀಡಾದ ಘಟನೆ ವರದಿಯಾಗಿದೆ.
ಪೊಲೀಸರು ಅಲ್ಲೇ ಕಾರ್ಯ ನಿರತರಾಗಿದ್ದರೂ ಪಂಚಾಯತ್ ಚುನಾವಣೆಯಲ್ಲಿ ನಫೀಸಾ ಎಂಬಾಕೆ ಗೆಲವು ಸಾಧಿಸಿದ್ದಕ್ಕೆ ಸಮಾಜವಾದಿ ಪಕ್ಷದ ಕಾರ್ಯಕರ್ತರು ಗುಂಡು ಹಾರಿಸಿ ಸಂಭ್ರಮಾಚರಣೆ ನಡೆಸಿದ್ದರು. ಆ ವೇಳೆ ರಿಕ್ಷಾದಲ್ಲಿ ಅಮ್ಮನೊಂದಿಗೆ ತೆರಳುತ್ತಿದ್ದ ಹರ್ಷ್ ಎಂಬ ಬಾಲಕನಿಗೆ ಗುಂಡು ತಾಗಿದೆ. ನೇರ ಎದೆಗೆ ಗುಂಡು ಹೊಕ್ಕಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಬಾಲಕನನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಬಾಲಕನ ಮೃತದೇಹವನ್ನು ರಸ್ತೆಯಲ್ಲಿಟ್ಟು ಆತನ ಸಂಬಂಧಿಕರು ಪ್ರತಿಭಟನೆಯನ್ನೂ ನಡೆಸಿದರು.
ಏತನ್ಮಧ್ಯೆ, ಕೋವಿ ಹಿಡಿದು ನೃತ್ಯ ಮಾಡುತ್ತಾ ಸಂಭ್ರಮಾಚರಣೆ ಮಾಡುತ್ತಿರುವ ಸಮಾಜವಾದಿ ಪಕ್ಷದ ಕಾರ್ಯಕರ್ತರ ವಿಡಿಯೋ ಕೂಡಾ ಬಿಡುಗಡೆಯಾಗಿದೆ. ಭಾನುವಾರ ಈ ಘಟನೆ ನಡೆದಿದ್ದು, ಇಲ್ಲಿಯವರೆಗೆ ಯಾರನ್ನೂ ಬಂಧಿಸಿರುವ ಬಗ್ಗೆ ವರದಿಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT