ಸಾಂದರ್ಭಿಕ ಚಿತ್ರ 
ದೇಶ

ಸಿಯಾಚಿನ್ ನಲ್ಲಿ ಮೃತಪಟ್ಟ ಕರ್ನಾಟಕದ ಯೋಧ ಟಿಟಿ ನಾಗೇಶ್ ಶವ ಪತ್ತೆ

ಜಮ್ಮು ಕಾಶ್ಮೀರದ ಸಿಯಾಚಿನ್ ನಲ್ಲಿ ಮೃತಪಟ್ಟಿದ್ದ ಕರ್ನಾಟಕದ ಮತ್ತೊಬ್ಬ ಯೋಧ ಟಿಟಿ ನಾಗೇಶ್ ಅವರ ಮೃತದೇಹ...

ನವದೆಹಲಿ: ಜಮ್ಮು ಕಾಶ್ಮೀರದ ಸಿಯಾಚಿನ್ ನಲ್ಲಿ ಮೃತಪಟ್ಟಿದ್ದ ಕರ್ನಾಟಕದ ಮತ್ತೊಬ್ಬ ಯೋಧ ಟಿಟಿ ನಾಗೇಶ್ ಅವರ ಮೃತದೇಹ ಪತ್ತೆಯಾಗಿದೆ ಎಂದು ಸೇನಾ ಅಧಿಕಾರಿಗಳು ಯೋಧನ ಕುಟುಂಟ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.
38 ವರ್ಷದ ಟಿಟಿ ನಾಗೇಶ್ ಅವರ ಮೃತದೇಹ ಹಾಸನಕ್ಕೆ ಫೆ.11ರಂದು ಬೆಳಗ್ಗೆ 11ಕ್ಕೆ ತರಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆಂದು ಎಂದು ತಿಳಿದು ಬಂದಿದೆ.
ಮದ್ರಾಸ್ ರೆಜಿರ್ಮೆಂಟ್ ಸುಬೇದಾರ್ ಟಿಟಿ ನಾಗೇಶ್ ಅವರು ಜಮ್ಮು ಕಾಶ್ಮೀರದ ರಿಯಾಚಿನ್ ನ ಗಡಿ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸಂಭವಿಸಿದ ಹಿಮಪಾತದಲ್ಲಿ ಮೃತಪಟ್ಟಿದ್ದರು. ಅವರ ಪಾರ್ಥೀವ ಶರೀರವನ್ನು ದೆಹಲಿಗೆ ತಂದು ನಂತರ ಹಾಸನಕ್ಕೆ ಕಳುಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಕಳೆದ 20 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಹಾಸನ ಜಿಲ್ಲೆ ತೇಜೂರಿನ ಸುಬೇದಾರ್ ಟಿಟಿ ನಾಗೇಶ್ ನಿವೃತ್ತಿ ಹೊಂದುವ ಹಂತದಲ್ಲಿದ್ದರು. ಇವರ ಪತ್ನಿ ಆಶಾ ಹಾಗೂ ಇಬ್ಬರು ಮಕ್ಕಳು ಹಾಸನ ನಗರಕ್ಕೆ ಹೊಂದಿಕೊಂಡ ಪುಟ್ಟಹಳ್ಳಿ ತೇಜೂರಿನಲ್ಲಿ ವಾಸವಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT