ಸಾಂದರ್ಭಿಕ ಚಿತ್ರ 
ದೇಶ

ವಾರಂಗಲ್ ಬಳಿ ಯುವತಿಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ

ಪತ್ನಿ ಸ್ವರೂಪಳಿಗೆ ಪರಿಹಾರಧನ ನೀಡಬೇಕೆಂದು ಊರಿನ ಹಿರಿಯರು ಪಂಚಾಯ್ತಿ ನಡೆಸಿ ತೀರ್ಮಾನಿಸಿದ್ದರು. ಆದರೆ ಮೊದಲ ಪತ್ನಿಗೆ ಪರಿಹಾರಧನ ನೀಡಲು ರವಿ...

ವಾರಂಗಲ್: ಇಲ್ಲಿನ ವರ್ಧನ್ನಪೇಟ್ ಪ್ರದೇಶದಲ್ಲಿ ಯುವತಿಯೊಬ್ಬಳನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ವರದಿಯಾಗಿದೆ.
ಏನಿದು ಪ್ರಕರಣ? 
ಅಂಗೋತು ತೌರ್ಯ ಅಲಿಯಾಸ್ ಅನಿತಾ (18) ಎಂಬಾಕೆ ಆಟೋಚಾಲಕ ಬನೋತು ರವಿ (35) ಎಂಬಾತನೊಂದಿಗೆ ಓಡಿ ಹೋಗಿ 2015 ಮಾರ್ಚ್‌ನಲ್ಲಿ ಮದುವೆಯಾಗಿದ್ದಳು. ಈ ರವಿಗೆ ಮೊದಲು ಒಂದು ಮದುವೆಯಾಗಿದ್ದು ಅದರಲ್ಲಿ ಎರಡು ಮಕ್ಕಳಿವೆ. ರವಿಯ ಮೊದಲ ಪತ್ನಿ ಸ್ವರೂಪ, ಅನಿತಾ ಜತೆಗಿನ ಸಂಬಂಧವನ್ನು ವಿರೋಧಿಸಿದ್ದು, ರವಿ ಮತ್ತು ಅನಿತಾ ಜತೆಯಾಗಿಯೇ ಸಂಸಾರ ನಡೆಸುತ್ತಿದ್ದರು.
ಪತ್ನಿ ಸ್ವರೂಪಳಿಗೆ ಪರಿಹಾರಧನ ನೀಡಬೇಕೆಂದು ಊರಿನ ಹಿರಿಯರು ಪಂಚಾಯ್ತಿ ನಡೆಸಿ ತೀರ್ಮಾನಿಸಿದ್ದರು. ಆದರೆ ಮೊದಲ ಪತ್ನಿಗೆ ಪರಿಹಾರಧನ ನೀಡಲು ರವಿ ನಿರಾಕರಿಸಿದ್ದನು. ಇದರಿಂದ ರೊಚ್ಚಿಗೆದ್ದ ಸ್ವರೂಪಳ ಸಂಬಂಧಿಕರು ನೆರಮನೆಯಲ್ಲಿ ಆಶ್ರಯ ಪಡೆದಿದ್ದ ಅನಿತಾಳನ್ನು ಹೊರಗೆಳೆದು ಆಕ್ರಮಿಸಿದ್ದಾರೆ. ಆಕೆಯ ತೊಡೆ ಮತ್ತು ಗುಪ್ತಾಂಗದ ಮೇಲೆ ಬೆಂಕಿ ಕೊಳ್ಳಿಯಿಂದ ಸುಡಲಾಗಿದೆ. ಇಷ್ಟೆಲ್ಲಾ ಆದ ನಂತರ ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದ ಬೀದಿಯಲ್ಲಿ ಮೆರವಣಿಗೆ ನಡೆಸಲಾಗಿದೆ.
ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಅನಿತಾಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭಾನುವಾರ ನಡೆದ ಪಂಚಾಯ್ತಿಯಲ್ಲಿ ಸ್ವರೂಪಳಿಗೆ ರವಿ ರು.7.50 ಲಕ್ಷ ನೀಡುವಂತೆ ಹಿರಿಯರು ಆದೇಶಿಸಿದ್ದರು. ಆದರೆ ತಾನು ತನ್ನ ಮಕ್ಕಳ ಹೆಸರಲ್ಲಿ ಅಷ್ಟು ಹಣವನ್ನು ಡೆಪಾಸಿಟ್ ಮಾಡುತ್ತೇನೆ. ಸ್ವರೂಪಳಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದನು.
ಸೋಮವಾರ ಮತ್ತೆ ಪಂಚಾಯ್ತಿ ಸೇರಿದಾಗ ಸ್ವರೂಪಳ ಸಂಬಂಧಿಕರು ರವಿ ಮೇಲೆ ದಾಳಿ ನಡೆಸಿದ್ದಾರೆ. ಈ ನಡುವೆ ಅವರ ದಾಳಿಯಿಂದ ತಪ್ಪಿಸಿಕೊಂಡ ರವಿ ಪೊಲೀಸರಿಗೆ ಫೋನ್ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ನೂರು ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಎಸ್ ಮಹೆಂದರ್ ಸ್ವರೂಪ ಅವರನ್ನು ಬಂಧಿಸಿತ್ತು, ತಲೆ ಮರೆಸಿಕೊಂಡಿರುವ ಇನ್ನಿಬ್ಬರ ಬಂಧನಕ್ಕಾಗಿ ಶೋಧ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT