ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ನಡುವೆ ಸಂಘರ್ಷ 
ದೇಶ

ಜವಾಹರ್ ಲಾಲ್ ನೆಹರೂ ವಿವಿಯಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ

ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ರಾತ್ರಿ ಎರಡು ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ನಡೆದಿರುವ ಬಗ್ಗೆ ವರದಿಯಾಗಿದೆ...

ನವದೆಹಲಿ: ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ರಾತ್ರಿ ಎರಡು ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ನಡೆದಿರುವ ಬಗ್ಗೆ ವರದಿಯಾಗಿದೆ. 
ಪಾರ್ಲಿಮೆಂಟ್ ದಾಳಿಯ ಅಪರಾಧಿ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ್ದನ್ನು ನ್ಯಾಯಾಂಗ ಮರಣದಂಡನೆ ಎಂದು ಹೇಳಿ ಎಡ ಪಂಥೀಯ ವಿದ್ಯಾರ್ಥಿಗಳ ಸಂಘಟನೆಯೊಂದು ವಿವಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿತ್ತು .2013 ಫೆ. 9 ತಿಹಾರ್ ಜೈಲಿನಲ್ಲಿ ಅಫ್ಜಲ್ ಗುರುವನ್ನು ಗಲ್ಲಿಗೇರಿಸಲಾಗಿತ್ತು. ಈ ದಿನವನ್ನು ಸ್ಮರಿಸಿ, ವಿದ್ಯಾರ್ಥಿ ಸಂಘಟನೆಯು 'ಶಹೀದ್ ಅಫ್ಜಲ್  ಗುರು' ಎಂದು  ಅಫ್ಜಲ್ ಗುರುವಿಗೆ ಜೈಕಾರ ಕೂಗಿದ್ದಾರೆ. ಮಾತ್ರವಲ್ಲದೆ ದೇಶ ವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕಾಶ್ಮೀರಿ ವಲಸೆಗಾರರಿಗೆ ಬೆಂಬಲ ಸೂಚಿಸಿ ಆಜಾದ್ ಕಾಶ್ಮೀರ್ ಹೋರಾಟಕ್ಕೆ ಜೈ ಎಂದಿದ್ದಾರೆ.
ಈ ಕಾರ್ಯಕ್ರಮ ನಡೆಸಲು ವಿವಿ ಅನುಮತಿ ನೀಡಿಲ್ಲವಾಗಿದ್ದರೂ, ವಿದ್ಯಾರ್ಥಿಗಳು ವಿವಿಯ ಸುತ್ತ ಪೋಸ್ಟರ್‌ಗಳನ್ನು ಅಂಟಿಸಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ವಿದ್ಯಾರ್ಥಿ ಸಂಘಟನೆಯ ಈ ನಡೆಯನ್ನು ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ತೀವ್ರವಾಗಿ ವಿರೋಧಿಸಿತ್ತು. ಕಾರ್ಯಕ್ರಮಕ್ಕೆ ಎಬಿವಿಪಿ ಕಾರ್ಯಕರ್ತರು ತಡೆಯೊಡ್ಡಿದ್ದು ಈ ವೇಳೆ ಎರಡು ಸಂಘಟನೆಗಳ ನಡುವೆ ಘರ್ಷಣೆ ನಡೆದಿದೆ. ವಿದ್ಯಾರ್ಥಿಗಳ ಜಗಳ ತಾರಕಕ್ಕೇರುತ್ತಿದ್ದಂತೆ ಕಾಲೇಜು ಅಧಿಕೃತರು ಪೊಲೀಸರನ್ನು ಕರೆಸಿ ವಿದ್ಯಾರ್ಥಿಗಳನ್ನು ಸಂಭಾಳಿಸಿದ್ದಾರೆ.
ಈ ಘಟನೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಜೆಎನ್‌ಯು ಉಪ  ಕುಲಪತಿ, ನಾವಿಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದು ವಿದ್ಯಾರ್ಥಿಗಳ ಹೇಳಿದ ಕಾರಣ ನಾವು ಅನುಮತಿ ನೀಡಿದ್ದೆವು. ಆದರೆ ಅದು ಪ್ರತಿಭಟನೆ ಎಂದು ಗೊತ್ತಾದ ಕೂಡಲೇ ಅದನ್ನು ನಿಲ್ಲಿಸಿ ಕ್ಯಾಂಪಸ್‌ನಲ್ಲಿ ಶಾಂತಿ ಕಾಪಾಡಿಕೊಂಡೆವು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು