ಉಚಿನ ಆ್ಯಂಬುಲೆನ್ಸ್ ನಲ್ಲೂ ಹಣಕ್ಕಾಗಿ ಪಟ್ಟು ಹಿಡಿದ ಚಾಲಕ: ಮಗು ಸಾವು 
ದೇಶ

ಉಚಿನ ಆ್ಯಂಬುಲೆನ್ಸ್ ನಲ್ಲಿ ಹಣಕ್ಕಾಗಿ ಪಟ್ಟು ಹಿಡಿದ ಚಾಲಕ: ಮಗು ಸಾವು

ನವಜಾತ ಶಿಶುಗಳಿಗಾಗಿ ಸರ್ಕಾರ ನಿಯೋಜಿಸಿರುವ ಉಚಿತ ಸೇವಾ ಆ್ಯಂಬುಲೆನ್ಸ್ ಚಾಲಕನೊಬ್ಬ ಹಣಕ್ಕಾಗಿ ಪಟ್ಟು ಹಿಡಿದು ಮಗುವಿನ ಪ್ರಾಣವೇ ಹೋಗುವಂತೆ ಮಾಡಿರುವ ಘಟನೆಯೊಂದು ಪಶ್ಚಿಮ ಬಂಗಾಳದ ಉತ್ತರ 24 ಜಿಲ್ಲೆಯ ಅಮದಂಗದ...

ಬರಾಸತ್: ನವಜಾತ ಶಿಶುಗಳಿಗಾಗಿ ಸರ್ಕಾರ ನಿಯೋಜಿಸಿರುವ ಉಚಿತ ಸೇವಾ ಆ್ಯಂಬುಲೆನ್ಸ್ ಚಾಲಕನೊಬ್ಬ ಹಣಕ್ಕಾಗಿ ಪಟ್ಟು ಹಿಡಿದು ಮಗುವಿನ ಪ್ರಾಣವೇ ಹೋಗುವಂತೆ ಮಾಡಿರುವ ಘಟನೆಯೊಂದು ಪಶ್ಚಿಮ ಬಂಗಾಳದ ಉತ್ತರ 24 ಜಿಲ್ಲೆಯ ಅಮದಂಗದ ಜತ್ರಪೋಟ ಪ್ರದೇಶದಲ್ಲಿ ಬುಧವಾರ ನಡೆದಿದೆ.

ಎಂಟು ತಿಂಗಳ ಮಗು ಸೋಹಾನಿ ಸುಲ್ತಾನ ಸಾವನ್ನಪ್ಪಿರುವ ಮಗುವಾಗಿದ್ದು, ಕಳೆದ ಹಲವು ದಿನಗಳಿಂದಲೂ ಮಗು ಉಸಿರಾಟ ಸಮಸ್ಯೆಯಿಂದ ಬಳಲುತ್ತಿತ್ತು. ಹೀಗಾಗಿ ಮಗುವನ್ನು ಬರಾಸತ್ ನಲ್ಲಿರುವ ಸರ್ಕಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ನಿನ್ನೆ ಮಗುವನ್ನು ತಪಾಸಣೆ ಮಾಡಿದ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿಸ್ತೆಗೆ ಕೊಲ್ತತಾ ಆಸ್ಪತ್ರೆಗೆ ದಾಖಲು ಮಾಡುವಂತೆ ಸಲಹೆ ನೀಡಿದ್ದಾರೆ.

ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗಳು ರಾಷ್ಟ್ರೀಯ ಆರೋಗ್ಯ ಕಾರ್ಯದ ಅಡಿಯಲ್ಲಿ ಸರ್ಕಾರ ಜನನಿ ಶಿಶು ಸುರಕ್ಷಾ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಯೋಜನೆಯಲ್ಲಿ ನವಜಾತ ಶಿಶುಗಳಿಗಾಗಿ ಸರ್ಕಾರ ಉಚಿತ ಆ್ಂಯಬುಲೆನ್ಸ್ ಸೇವೆಯನ್ನು ನೀಡುತ್ತದೆ ಎಂದು ಹೇಳಿದ್ದಾರೆ. ಇದರಂತೆ ಸಿಬ್ಬಂದಿಗಳ ಮಾತು ಕೇಳಿದ ಮಗುವಿನ ಪೋಷಕರು ಆ್ಂಯಬುಲೆನ್ಸ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ನಂತರ ಆ್ಂಯಬುಲೆನ್ಸ್ ಇದ್ದ ನಿಲ್ದಾಣಕ್ಕೆ ಪೋಷಕರು ಮಗುವನ್ನು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆ್ಂಯಬುಲೆನ್ಸ್ ನ ಚಾಲಕ ಹಣ ಪಾವತಿಸದೆ ಮಗುವನ್ನು ಕರೆದೊಯ್ಯಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ. ಅಲ್ಲದೆ, ಮಗುವಿಗೆ ನೀಡಲಾಗುವ ಆಮ್ಲಜನಕದ ಸಿಲಿಂಡರ್ ಗೆ 100 ಹಾಗೂ 750 ವಾಹನ ಚಾಲನೆ ಮಾಡಲು ಹಾಗೂ 150 ರುಪಾಯಿ ಹಣವನ್ನು ಟಿಪ್ಸ್ ಹಣವಾಗಿ ಒಟ್ಟು ರು.1000 ಹಣವನ್ನು ಪಾವತಿ ಮಾಡಿದರೆ ಮಾತ್ರ ಮಗುವನ್ನು ಕರೆದೊಯ್ಯುತ್ತೇನೆಂದು ಪಟ್ಟು ಹಿಡಿದಿದ್ದಾನೆ. ಈ ವೇಳೆ ಪೋಷಕರು ಹಾಗೂ ಚಾಲಕನ ನಡುವೆ 1 ಗಂಟೆಗಳ ಕಾಲ ಮಾತಿನ ಚಕಮಕಿ ನಡೆದಿದೆ.

ಚಾಲಕನ ಸಮಯ ವ್ಯರ್ಥದಿಂದಾಗಿ ಮಗುವಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಕೊಡಿಸಲು ಸಾಧ್ಯವಾಗದೆ ಮಗು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ. ಇದೀಗ ಮಗುವಿನ ಸಾವಿಗೆ ಚಾಲಕನೇ ಕಾರಣ ಎಂದು ಪೋಷಕರು ಆರೋಪಿಸುತ್ತಿದ್ದು, ಚಾಲಕನ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT