ಸಾಂದರ್ಭಿಕ ಚಿತ್ರ 
ದೇಶ

ಮತ್ತೆ ಸಮ-ಬೆಸ ನಿಯಮ: ಇಂದು ಕೇಜ್ರಿವಾಲ್ ರಿಂದ ದಿನಾಂಕ ಪ್ರಕಟ

ಜ.1ರಿಂದ 15 ದಿನಗಳ ಮಟ್ಟಿಗೆ ದೆಹಲಿಯಲ್ಲಿ ಜಾರಿಗೆ ತರಲಾಗಿದ್ದ ಸಮ- ಬೆಸಸಂಖ್ಯೆ ಆಧಾರಿತ ವಾಹನ ಓಡಾಟ ವ್ಯವಸ್ಥೆಯನ್ನು ಮತ್ತೂಮ್ಮೆ ಅನುಷ್ಠಾನಗೊಳಿಸಲು...

ನವದೆಹಲಿ:  ಜ.1ರಿಂದ 15 ದಿನಗಳ ಮಟ್ಟಿಗೆ ದೆಹಲಿಯಲ್ಲಿ ಜಾರಿಗೆ ತರಲಾಗಿದ್ದ ಸಮ- ಬೆಸಸಂಖ್ಯೆ ಆಧಾರಿತ ವಾಹನ ಓಡಾಟ ವ್ಯವಸ್ಥೆಯನ್ನು ಮತ್ತೂಮ್ಮೆ ಅನುಷ್ಠಾನಗೊಳಿಸಲು ದೆಹಲಿ ಸರ್ಕಾರ ಮುಂದಾಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ದಿನಾಂಕಗಳನ್ನು ಘೋಷಿಸಲಿದ್ದಾರೆ.  

ಸಿಬಿಎಸ್‌ಇ ಪರೀಕ್ಷೆಗಳು ಮುಗಿದ ಬಳಿಕ, ಅಂದರೆ ಏಪ್ರಿಲ್‌ನಲ್ಲಿ ಸಮ- ಬೆಸಸಂಖ್ಯೆ ವಾಹನ ಓಡಾಟ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

ಜನವರಿಯಲ್ಲಿ ಪ್ರಾಯೋಗಿಕವಾಗಿ 15 ದಿನಗಳ ಕಾಲ ಅನುಷ್ಠಾನಗೊಂಡಿದ್ದ ವ್ಯವಸ್ಥೆ ಕುರಿತು ಸಾರ್ವಜನಿಕರಿಂದ ದೆಹಲಿ ಸರ್ಕಾರ ಅಭಿಪ್ರಾಯ ಸಂಗ್ರಹಿಸಿತ್ತು.  ಆ ಪ್ರಕಾರ 11 ಲಕ್ಷ ಅಭಿಪ್ರಾಯಗಳು ಸಲ್ಲಿಕೆಯಾಗಿವೆ. ಅವುಗಳ ಪರಾಮರ್ಶೆ ನಡೆದಿದೆ ಎಂದು ಸಾರಿಗೆ ಸಚಿವ ಗೋಪಾಲ ರೈ ತಿಳಿಸಿದ್ದಾರೆ.

ಈ ನಡುವೆ ಸಮ-ಬೆಸ ಸಂಖ್ಯೆ ಆಧಾರಿತ ವಾಹನ ಸಂಚಾರ ವ್ಯವಸ್ಥೆ ಮರು ಜಾರಿ ಬಗ್ಗೆ ಚೇಂಜ್‌ ಡಾಟ್‌ ಓಆರ್‌ಜಿ ಎಂಬ ಸಂಸ್ಥೆ ಸಮೀಕ್ಷೆಯೊಂದನ್ನು ನಡೆಸಿದ್ದು, ಅದರಲ್ಲಿ ಶೇ.78ರಷ್ಟು ಜನ ವ್ಯವಸ್ಥೆಯ ಮರುಜಾರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT