ಮನಮೋಹನ್ ಸಿಂಗ್ 
ದೇಶ

ದೇಶಕ್ಕೆ ಮನಮೋಹನ್ ಸಿಂಗ್ ಕೊಟ್ಟ ಗಿಫ್ಟ್ 'ಆರ್ಥಿಕ ಸಮಸ್ಯೆ': ಬಿಜೆಪಿ

ದೇಶಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೊಟ್ಟ ಉಡುಗೊರೆ 'ಆರ್ಥಿಕ ಸಮಸ್ಯೆ' ಎಂದು...

ನವದೆಹಲಿ: ದೇಶಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೊಟ್ಟ ಉಡುಗೊರೆ 'ಆರ್ಥಿಕ ಸಮಸ್ಯೆ' ಎಂದು ಬಿಜೆಪಿ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಖಂಡಿಸಿದ ಮನಮೋಹನ್ ಸಿಂಗ್ ಅವರಿಗೆ ತಿರುಗೇಟು ನೀಡಿರುವ ಬಿಜೆಪಿ, ಆರ್ಥಿಕ ಸಮಸ್ಯೆಯೇ ದೇಶಕ್ಕೆ ಮನ್ ಮೋಹನ್ ಸಿಂಗ್ ಕೊಟ್ಟ ಉಡುಗೊರೆ ಎಂದು ಕಿಡಿ ಕಾರಿದೆ.
ಭಾರತ ಸಾಕಷ್ಟು ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಎಂದು ಅವರೇ ಹೇಳುತ್ತಿದ್ದಾರೆ. ಅಂತಹ ಆರ್ಥಿಕ ಸಮಸ್ಯೆಯನ್ನು ತಂದುಕೊಟ್ಟವರೇ ಮನಮೋಹನ್ ಸಿಂಗ್. ಯುಪಿಎ ತಂದಿಟ್ಟಿರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಎನ್ ಡಿಎ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ತಿಳಿಸಿದೆ.  
ಕೊನೆಗೂ ಮನಮೋಹನ್ ಸಿಂಗ್ ಅವರು ಮೋದಿ ಸರ್ಕಾರದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಇಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರು ಕೇವಲ ಒಂದು ಕುಟುಂಬಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ, ದೇಶಕ್ಕಾಗಲ್ಲ ಎಂದು ಬಿಜೆಪಿ ಆರೋಪಿಸಿದೆ. 
ಉದ್ಯಮಿಗಳು ಸರ್ಕಾರದ ಸಚಿವರೊಂದಿಗೆ ಚರ್ಚೆ ನಡೆಸುತ್ತಿರುವಾಗ ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಾರೆ, ಆದರೆ ಹೊರಗೆ ಬಂದ ಬಳಿಕ ಏನೂ ಬದಲಾವಣೆ ಆಗಿಲ್ಲ ಎಂದು ಹೇಳಿಕೆ ನೀಡುತ್ತಾರೆ. ಇದರಿಂದ ತಿಳಿಯುತ್ತದೆ ಕೇಂದ್ರ ಸರ್ಕಾರದಲ್ಲಿ ವಿಶ್ವಾಸದ ಕೊರತೆ ಇದೆ ಎಂದು ಸಂದರ್ಶನವೊಂದರಲ್ಲಿ ಮನಮೋಹನ್ ಸಿಂಗ್ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT