ವೆಂಕಯ್ಯ ನಾಯ್ಡು 
ದೇಶ

ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ತಾರತಮ್ಯ ಮಾಡಿಲ್ಲ: ವೆಂಕಯ್ಯ ನಾಯ್ಡು

ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕೇಳಿಬಂದಿರುವ...

ಇಂದೋರ್: ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕೇಳಿಬಂದಿರುವ ಆರೋಪವನ್ನು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ತಳ್ಳಿಹಾಕಿದ್ದಾರೆ.
ಇಂದೋರ್ ನಲ್ಲಿ ಸ್ಮಾರ್ಟ್ ಸಿಟಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ಯಾವುದೇ ತಾರತಮ್ಯ ಎಸಗಿಲ್ಲ. ಇದರಿಂದ ನಾನಾಗಲಿ ಅಥವಾ ಬಿಜೆಪಿಯಾಗಲಿ ಮಾಡುವಂತದ್ದು ಏನೂ ಇಲ್ಲ ಎಂದು ಅವರು ಹೇಳಿದ್ದಾರೆ.
ಉತ್ತಮ ಕಾರ್ಯವೈಖರಿ ನಡೆಸುವುದಕ್ಕಾಗಿ ಸಾಧ್ಯವಾಗುವ ನಗರಗಳನ್ನು ಸ್ಮಾರ್ಟ್ ಸಿಟಿಗಾಗಿ ಆಯ್ಕೆ ಮಾಡಲಾಗಿದೆ. ನಿಯಮಗಳ ಅನುಸಾರವಾಗಿ ಆಯ್ಕೆ ಮಾಡಲಾಗಿದೆ. 
ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಕೆಲವು ನಗರಗಳನ್ನು ಸ್ಮಾರ್ಟ್ ಸಿಟಿ ಮೊದನೇ ಹಂತದಲ್ಲಿ ಕೈಬಿಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಲೋಕಸಭಾ ಕ್ಷೇತ್ರವಾದ ವಾರಣಾಸಿ ಸೇರಿಂದತೆ ಅನೇಕ ಕೇಂದ್ರ ಸಚಿವರ ಕ್ಷೇತ್ರಗಳನ್ನು ಕೂಡ ಆಯ್ಕೆ ಮಾಡಿಲ್ಲ. 
ತಾರತ್ಯಮವೆಸಗಲಾಗಿದೆ ಎಂದು ಮಾತನಾಡುವ ರಾಜ್ಯ ಸರ್ಕಾರಗಳು ಮತ್ತು ನಗರ ಕೇಂದ್ರಗಳು, ಅವರನ್ನು ಏಕೆ ಹೊರತುಪಡಿಸಲಾಯಿತು ಎಂಬುದರ ಬಗ್ಗೆ ಸಿಂಹಾವಲೋಕನ ಮಾಡಬೇಕು ಎಂದು ನಾಯ್ಡು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT