ವೆಂಕಯ್ಯ ನಾಯ್ಡು 
ದೇಶ

ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ತಾರತಮ್ಯ ಮಾಡಿಲ್ಲ: ವೆಂಕಯ್ಯ ನಾಯ್ಡು

ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕೇಳಿಬಂದಿರುವ...

ಇಂದೋರ್: ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕೇಳಿಬಂದಿರುವ ಆರೋಪವನ್ನು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ತಳ್ಳಿಹಾಕಿದ್ದಾರೆ.
ಇಂದೋರ್ ನಲ್ಲಿ ಸ್ಮಾರ್ಟ್ ಸಿಟಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಆಯ್ಕೆಯಲ್ಲಿ ಯಾವುದೇ ತಾರತಮ್ಯ ಎಸಗಿಲ್ಲ. ಇದರಿಂದ ನಾನಾಗಲಿ ಅಥವಾ ಬಿಜೆಪಿಯಾಗಲಿ ಮಾಡುವಂತದ್ದು ಏನೂ ಇಲ್ಲ ಎಂದು ಅವರು ಹೇಳಿದ್ದಾರೆ.
ಉತ್ತಮ ಕಾರ್ಯವೈಖರಿ ನಡೆಸುವುದಕ್ಕಾಗಿ ಸಾಧ್ಯವಾಗುವ ನಗರಗಳನ್ನು ಸ್ಮಾರ್ಟ್ ಸಿಟಿಗಾಗಿ ಆಯ್ಕೆ ಮಾಡಲಾಗಿದೆ. ನಿಯಮಗಳ ಅನುಸಾರವಾಗಿ ಆಯ್ಕೆ ಮಾಡಲಾಗಿದೆ. 
ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಕೆಲವು ನಗರಗಳನ್ನು ಸ್ಮಾರ್ಟ್ ಸಿಟಿ ಮೊದನೇ ಹಂತದಲ್ಲಿ ಕೈಬಿಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಲೋಕಸಭಾ ಕ್ಷೇತ್ರವಾದ ವಾರಣಾಸಿ ಸೇರಿಂದತೆ ಅನೇಕ ಕೇಂದ್ರ ಸಚಿವರ ಕ್ಷೇತ್ರಗಳನ್ನು ಕೂಡ ಆಯ್ಕೆ ಮಾಡಿಲ್ಲ. 
ತಾರತ್ಯಮವೆಸಗಲಾಗಿದೆ ಎಂದು ಮಾತನಾಡುವ ರಾಜ್ಯ ಸರ್ಕಾರಗಳು ಮತ್ತು ನಗರ ಕೇಂದ್ರಗಳು, ಅವರನ್ನು ಏಕೆ ಹೊರತುಪಡಿಸಲಾಯಿತು ಎಂಬುದರ ಬಗ್ಗೆ ಸಿಂಹಾವಲೋಕನ ಮಾಡಬೇಕು ಎಂದು ನಾಯ್ಡು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT