ರವಿ ಪೂಜಾರಿ 
ದೇಶ

ಭೂಗತ ಪಾತಕಿ ರವಿ ಪೂಜಾರಿಯಿಂದ ಹುರಿಯತ್ ನಾಯಕ ಸಯೀದ್ ಅಲಿ ಗಿಲಾನಿಗೆ ಕೊಲೆ ಬೆದರಿಕೆ

ಭೂಗತ ಪಾತಕಿ ರವಿ ಪೂಜಾರಿ ಸರ್ವಪಕ್ಷಗಳ ಹುರಿಯತ್ ಕಾನ್ಫೆರೆನ್ಸ್ ಅಧ್ಯಕ್ಷ ಸಯೀದ್ ಅಲಿ ಗೀಲಾನಿಗೆ ಕೊಲೆ ಬೆದರಿಕೆ ಹಾಕಿರುವುದಾಗಿ...

ಶ್ರೀನಗರ: ಭೂಗತ ಪಾತಕಿ ರವಿ ಪೂಜಾರಿ ಸರ್ವಪಕ್ಷಗಳ ಹುರಿಯತ್ ಕಾನ್ಫೆರೆನ್ಸ್ ಅಧ್ಯಕ್ಷ ಸಯೀದ್ ಅಲಿ ಗೀಲಾನಿಗೆ ಕೊಲೆ ಬೆದರಿಕೆ ಹಾಕಿರುವುದಾಗಿ ಭಾನುವಾರ ಮಾಧ್ಯಮಗಳು ವರದಿ ಮಾಡಿವೆ.
ಶ್ರೀನಗರದ ಹೈದರಾಪುರ ಪ್ರದೇಶದಲ್ಲಿರುವ ಹುರಿಯತ್ ಕಚೇರಿಯ ಸ್ಥಿರ ದೂರವಾಣಿಗೆ ಕರೆ ಮಾಡಿದ ಪೂಜಾರಿ, ಗೀಲಾನಿಯನ್ನು ಹತ್ಯೆ ಮಾಡುವುದಾಗಿ ಹುರಿಯತ್ ಕಾನ್ಫೆರೆನ್ಸ್ ವಕ್ತಾರ ಅಯಾಜ್ ಅಕ್ಬರ್ ಹೇಳಿರುವುದಾಗಿ ಪಾಕಿಸ್ತಾನ ದಿನ ಪತ್ರಿಕೆ ದಿ ನೇಷನ್ ವರದಿ ಮಾಡಿದೆ.
ದೂರವಾಣಿ ಮೂಲಕ ಬೆದರಿಕೆ ಹಾಕಿದ ಭೂಗತ ಪಾತಕಿಯ ಭಾಷಣೆ ಅನಾಗರಕಿ ಮತ್ತು ತುಂಬಾ ಕೀಳುಮಟ್ಟದ್ದಾಗಿತ್ತು ಎಂದು ಅಕ್ಬರ್ ಹೇಳಿದ್ದಾರೆ. ಅಲ್ಲದೆ ಈ ಬೆದರಿಕೆಗಳಿಗೆ ಬಗ್ಗದೆ ಗೀಲಾನಿ ಅವರು ಕಾಶ್ಮೀರ ಸ್ವಾತಂತ್ರ್ಯಕ್ಕಾಗಿ ತಮ್ಮ ಹೋರಾಟವನ್ನು ಮುಂದುವರೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಭೂಗತ ಪಾತಿಕ ಗೀಲಾನಿಗೆ ಜೀವ ಬೆದರಿಕೆ ಹಾಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ರವಿ ಪೂಜಾರಿ ಪರೋಕ್ಷವಾಗಿ ಭಾರತ ಸರ್ಕಾರಕ್ಕೆ ಮತ್ತು ಕೋಮುವಾದಿಗಳನ್ನು ಬೆಂಬಲಿಸುತ್ತಿರುವುದು ಸ್ಪಷ್ಟವಾಗಿದೆ ಎಂದು ಅಕ್ಬರ್ ಹೇಳಿರುವುದಾಗಿ ವರದಿ ಮಾಡಲಾಗಿದೆ.
ಒಂದು ವೇಳೆ ಹುರಿಯತ್ ಅಧ್ಯಕ್ಷರ ಜೀವಕ್ಕೆ ಧಕ್ಕೆಯಾದರೆ ಅದಕ್ಕೆ ಭಾರತ ಸರ್ಕಾರವೇ ನೇರ ಹೊಣೆ ಎಂದು ಸಹ ಅಕ್ಬರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT