ಒಪಿ ಶರ್ಮಾ 
ದೇಶ

ಪಟಿಯಾಲ ಕೋರ್ಟ್ ಆವರಣದಲ್ಲಿ ಗಲಾಟೆ: ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಬಿಜೆಪಿ ಶಾಸಕ

ರಾಷ್ಟ್ರದ್ರೋಹ ಆರೋಪದ ಮೇಲೆ ಬಂಧಿತನಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ, ಯೂನಿಯನ್ ಅಧ್ಯಕ್ಷ ಕನ್ಹಯ ಕುಮಾರ್ ನನ್ನು ಪಟಿಯಾಲ...

ನವದೆಹಲಿ: ರಾಷ್ಟ್ರದ್ರೋಹ ಆರೋಪದ ಮೇಲೆ ಬಂಧಿತನಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ, ಯೂನಿಯನ್ ಅಧ್ಯಕ್ಷ ಕನ್ಹಯ ಕುಮಾರ್ ನನ್ನು ಪಟಿಯಾಲ ಹೌಸ್ ಕೋರ್ಟ್ ಮುಂದೆ ಹಾಜರು ಪಡಿಸುವ ವೇಳೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಶಾಸಕ ಒ.ಪಿ ಶರ್ಮಾ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿದ್ದಾರೆ.

ಪಟಿಯಾಲ ಕೋರ್ಟ್ ಆವರಣದಲ್ಲಿ ಘರ್ಷಣೆ ವೇಳೆ ಶರ್ಮಾ ಕೆಳಗೆ ಬಿದ್ದ ವ್ಯಕ್ತಿಯನ್ನು ಕಾಲಿನಿಂದ ಒದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ವೇಳೆ ಮಾತನಾಡಿದ ಒ.ಪಿ ಶರ್ಮಾ ದೇಶವಿರೋಧಿ ಘೋಷಣೆಗಳು ಹರಡಬಾರದು. ಅಂತ ದೇಶ ವಿರೋಧಿ ಹೇಳಿಕೆಗಳನ್ನು ನೀಡಿದರೆ ಅಂತವರನ್ನು ಒದೆಯಲಾಗುವುದು ಎಂದರು.

ಈ ಮಧ್ಯೆ ವ್ಯಕ್ತಿಯೊರ್ವನ ಮೇಲೆ ಹಲ್ಲೆ ಕುರಿತಂತೆ ಕೇಳಿದ ಪ್ರಶ್ನೆಗೆ ಶರ್ಮಾ ಅವರು, ನಾನು ವ್ಯಕ್ತಿಯ ಮೇಲೆ ಹಲ್ಲೆ ಮಾಡಿಲ್ಲ. ಪಾಕಿಸ್ತಾನ ಪರ ಘೋಷಣೆಯನ್ನು ಕೂಗುತ್ತಿದ್ದ ವ್ಯಕ್ತಿ ಕೆಳಗೆ ಬೀಳುತ್ತಿದ್ದರಿಂದ ಹಿಡಿದುಕೊಳ್ಳಲು ಯತ್ನಿಸಿದ್ದೆ ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT