ದಶಕಗಳ ಯೋಜನೆ ಹುಬ್ಬಳ್ಳಿ-ಅಂಕೋಲ ರೈಲಿಗೆ ಗ್ರೀನ್ ಸಿಗ್ನಲ್ 
ದೇಶ

ದಶಕಗಳ ಯೋಜನೆ ಹುಬ್ಬಳ್ಳಿ-ಅಂಕೋಲ ರೈಲಿಗೆ ಗ್ರೀನ್ ಸಿಗ್ನಲ್

ದಶಕಗಳ ಹಿಂದಿನಿಂದಲೂ ನೆನೆಗುದಿಗೆ ಬಿದ್ದಿದ್ದ ವಿವಾದಿತ ಹುಬ್ಬಳ್ಳಿ-ಅಂಕೋಲಾ ನಡುವಿನ ಪ್ರಸ್ತಾವಿತ ರೈಲು ಮಾರ್ಗ ನಿರ್ಮಾಣ ಯೋಜನೆಗೆ ರಾಷ್ಟ್ರೀಯ ಹಸಿರು ಪೀಠ (ಎನ್ ಜಿಟಿ) ನ್ಯಾಯಾಧೀಕರಣ ಅಸ್ತು ಎಂದಿದೆ...

ನವದೆಹಲಿ: ದಶಕಗಳ ಹಿಂದಿನಿಂದಲೂ ನೆನೆಗುದಿಗೆ ಬಿದ್ದಿದ್ದ ವಿವಾದಿತ ಹುಬ್ಬಳ್ಳಿ-ಅಂಕೋಲಾ ನಡುವಿನ ಪ್ರಸ್ತಾವಿತ ರೈಲು ಮಾರ್ಗ ನಿರ್ಮಾಣ ಯೋಜನೆಗೆ ರಾಷ್ಟ್ರೀಯ ಹಸಿರು ಪೀಠ (ಎನ್ ಜಿಟಿ) ನ್ಯಾಯಾಧೀಕರಣ ಅಸ್ತು ಎಂದಿದೆ. 
ಹುಬ್ಬಳ್ಳಿ-ಅಂಕೋಲ ರೈಲು ಮಾರ್ಗವು ಜೀವವೈವಿಧ್ಯತೆಯನ್ನು ಹೊಂದಿರುವ ಸೂಕ್ಷ್ಮ ತಾಣವಾದ ಪಶ್ಚಿಮ ಘಟ್ಟಕ್ಕೆ ಸಮಸ್ಯೆಯನ್ನೊಡ್ಡಲಿದೆ ಎಂದು ಹೇಳಿ ಪರಿಸರ ಪ್ರೇಮಿಗಳು ಈ ಯೋಜನೆಗೆ ಹಲವು ವಿರೋಧಗಳನ್ನು ವ್ಯಕ್ತಪಡಿಸಿದ್ದರು. ಈ ಯೋಜನೆ ಕಾರ್ಯಗತವಾದರೆ ಉತ್ತರ ಕರ್ನಾಟಕದ ಭಾಗದ ಜನರಿಗೆ ಉತ್ತಮ ಅವಕಾಶಗಳು ಸಿಗಲಿದೆ ಹಾಗೂ ಜನರ ಪಾಲಿಗೆ ಅದೃಷ್ಟದ ಬಾಗಿಲು ತೆರೆಯಲಿದೆ ಎಂದು ಉದ್ಯಮಿಗಳು ಹಾಗೂ ಅಧಿಕಾರಿಗಳು ತಮ್ಮ ವಾದವನ್ನು ಮಂಡಿಸಿದ್ದರು. 
1998ರಿಂದಲೂ ಈ ವಿವಾದ ನೆಲಕಚ್ಚಿಕೊಂಡಿತ್ತು. ಬಳ್ಳಾರಿ-ಹೊಸಪೇಟೆ ಗಣಿಗಳಿಂದ ಕಬ್ಬಿಣದ ಅದಿರು ಸಾಗಿಸುವ ನಿಟ್ಟಿನಲ್ಲಿ 168 ಕಿ.ಮೀ.ದೂರದ ಈ ರೈಲೂ ಮಾರ್ದ ಕುರಿತಂತೆ ವರದಿ ಸಲ್ಲಿಸಲು ಸರ್ವೋಚ್ಛ ನ್ಯಾಯಾಲಯ ಕಳೆದ ವರ್ಷ ಕೇಂದ್ರ ಸಬಲೀಕರಣ ಸಮಿತಿ (ಸಿಇಸಿ) ರಚಿಸಿದ್ದ ಹಿನ್ನೆಲೆಯಲ್ಲಿ ಇದೀಗ ಹಸಿರು ಪೀಠ ನೀಡಿರುವ ಈ ಆದೇಶ ಮಹತ್ವವನ್ನು ಪಡೆದುಕೊಂಡಿದೆ. 
ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅರಣ್ಯ ಭೂಮಿಯನ್ನು ಅರಣ್ಯೇತರ ಭೂಮಿಯನ್ನಾಗಿ ಪರಿವರ್ತಿಸಲು ಅರ್ಜಿಸಲ್ಲಿಸಬೇಕು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಬೇಕು. ಅದನ್ನು ಪರಿಶೀಲಿಸಿ ರಾಜ್ಯ ಸರ್ಕಾರ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಪೂರ್ವಾನುಮತಿಯೊಂದಿಗೆ ಈ ಬಗ್ಗೆ ಆದೇಶ ನೀಡಬೇಕು ಎಂದು ಪೀಠ ಆದೇಶ ನೀಡಿದೆ. ಅಲ್ಲದೆ, ಸುಪ್ರೀಂಕೋರ್ಟ್ ನೇಮಿಸಿದ್ದ ಸಮಿತಿಗೆ ರೈಲ್ವೆ ಇಲಾಖೆ ಕೈಗೊಳ್ಳಲು ಉದ್ದೇಶಿಸಿದ್ದ ಯೋಜನೆಗೆ ತಡೆ ವಿಧಿಸಲು ಯಾವುದೇ ಅಧಿಕಾರ ಇಲ್ಲ ಎಂದು ಹೇಳಿದೆ. ಇದರಂತೆ ಪೀಠ ನೀಡಿರುವ ಆದೇಶ ಅನ್ವಯ ಯೋಜನೆಗೆ ಈ ಕಾಯ್ದೆ ಪ್ರಕಾರ ರಾಜ್ಯ ಸರ್ಕಾರ ಮುಂದಿನ ಕಾರ್ಯ ಕೈಗೊಳ್ಳಬಹುದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT