ಜೆಎನ್ ಯು ಪ್ರಕರಣಕ್ಕೆ ಕೋಮು ಬಣ್ಣ ಬಳಿಯುತ್ತಿರುವ ರಾಜನಾಥ್ ಸಿಂಗ್: ಮನೀಷ್ ತಿವಾರಿ ಆರೋಪ 
ದೇಶ

ಜೆಎನ್ ಯು ಪ್ರಕರಣಕ್ಕೆ ಕೋಮು ಬಣ್ಣ ಬಳಿಯುತ್ತಿರುವ ರಾಜನಾಥ್ ಸಿಂಗ್: ಮನೀಷ್ ತಿವಾರಿ ಆರೋಪ

ಜೆಎನ್ ಯು ಪ್ರಕರಣ ಇದೀಗ ರಾಜಕೀಯ ನಾಯಕರ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪ್ರಕರಣಕ್ಕೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ...

ನವದೆಹಲಿ: ಜೆಎನ್ ಯು ಪ್ರಕರಣ ಇದೀಗ ರಾಜಕೀಯ ನಾಯಕರ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪ್ರಕರಣಕ್ಕೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ. 
ನಿನ್ನೆಯಷ್ಟೇ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಜೆಎನ್ ಯು ಪ್ರಕರಣ ಸಂಬಂಧ ಹೇಳಿಕೆಯೊಂದನ್ನು ನೀಡಿದ್ದರು. ಜೆಎನ್ ಯು ಪ್ರತಿಭಟನೆ ಹಿಂದೆ ಉಗ್ರ ಹಫೀಜ್ ಸಯೀದ್ ಇದ್ದಾನೆ. ದೇಶದ್ರೋಹ ಚಟುವಟಿಕೆಯಲ್ಲಿ ಭಾಗಿಯಾಗುವವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದರು. 
ಈ ಹೇಳಿಕೆ ವಿರುದ್ಧ ಟ್ವಿಟರ್ ನಲ್ಲಿ ಕಿಡಿಕಾರಿರುವ ಕಾಂಗ್ರೆಸ್ ಹಿರಿಯ ನಾಯಕ ಮನೀಷ್ ತಿವಾರಿ ಅವರು, ರಾಜನಾಥ ಸಿಂಗ್ ಅವರು ಪ್ರಕರಣಕ್ಕೆ ಕೋಮು ಬಣ್ಣ ಬಳಿಯುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಷ್ಕರ್-ಇ-ತೊಯ್ಬಾ ಮುಖ್ಯಸ್ಥನನ್ನು ಬಂಧಿಸುವ ಕುರಿತಂತೆ ಪಾಕಿಸ್ತಾನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಬೇಕಿದೆ ಎಂದು ಹೇಳಿದ್ದಾರೆ. 
ಇದರಂತೆ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಕೂಡ ರಾಜನಾಥ್ ಸಿಂಗ್ ಅವರ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ. ಗೃಹ ಸಚಿವರು ಯಾವ ಮೂಲಗಳಿಂದ ಹಾಗೂ ಯಾವ ಇಲಾಖೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆಂಬುದನ್ನು ಸ್ಪಷ್ಟಪಡಿಸಬೇಕು. ಜೆಎನ್ ಯು ಪ್ರಕರಣಕ್ಕೂ ಉಗ್ರ ಹಫೀಜ್ ಸಯ್ಯೀದ್ ಗೂ ನಂಟಿದೆ ಎಂದು ಹೇಳುತ್ತಿರುವ ಗೃಹ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಟ್ವಿಟರ್ ನಲ್ಲಿ ಆಗ್ರಹಿಸಿದ್ದಾರೆ. 
ಗೃಹ ಸಚಿವರ ಹೇಳಿಕೆಗೆ ವಿಪಕ್ಷಗಳು ಕಿಡಿಕಾರುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಗೃಹ ಸಚಿವಾಲಯದ ವಕ್ತಾರ, ಪ್ರಕರಣ ಸಂಬಂಧ ಗೃಹ ಸಚಿವರಿಗೆ ವಿವಿಧ ಇಲಾಖೆಗಳಿಂದ ಮಾಹಿತಿಗಳು ಬಂದಿತ್ತು. ಈ ಹಿನ್ನೆಲೆಯಲ್ಲಿಯೇ ಅವರು ಈ ರೀತಿಯ ಹೇಳಿಕೆಯನ್ನು ನೀಡಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT