ಅಂತಿಮ ಗೌರವ 
ದೇಶ

ಭಾರತೀಯ ಸೇನೆಯಿಂದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಯೋಧರಿಗೆ ಅಂತಿಮ ಗೌರವ

ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಒಂಬತ್ತು ವೀರಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಒಂಬತ್ತು ವೀರಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು.

ನವದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಹುತಾತ್ಮ ಯೋಧರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಭಾರತೀಯ ಸೇನೆಯ ಹಲವು ಅಧಿಕಾರಿಗಳು ರಕ್ಷಣಾ ಇಲಾಖೆ ಅಧಿಕಾರಿಗಳು ಯೋಧರ ಅಂತಿಮ ದರ್ಶನ ಪಡೆದರು.

ಹುತಾತ್ಮರಾದ 9 ಯೋಧರ ಪಾರ್ಥಿವ ಶರೀರವನ್ನು ಭಾನುವಾರ ಲೇಹ್ ಗೆ ತರಲಾಗಿತ್ತು. ಇದೀಗ ಪಾಲಂ ವಿಮಾನ ನಿಲ್ದಾಣದಲ್ಲಿ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಪಾರ್ಥಿವ ಶರೀರವನ್ನು ಬೆಂಗಳೂರು, ಪುಣೆ, ಹೈದರಾಬಾದ್, ಮಧುರೈ, ಚೆನ್ನೈ ಹಾಗೂ ತಿರುವನಂತಪುರಂಗೆ ರವಾನಿಸಲಾಗುತ್ತದೆ.

ಸಿಯಾಚಿನ್ ನಲ್ಲಿ ಫೆಬ್ರವರಿ 3 ರಂದು ಸಂಭವಿಸಿದ ಭೀಕರ ಹಿಮಪಾತದಲ್ಲಿ 9 ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಧಾರವಾಡದ ಯೋಧ ಹನುಮಂತಪ್ಪ ಕೊಪ್ಪದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಕಳೆದ ವಾರವೇ ಅವರ ಪಾರ್ಥಿವ ಶರೀರವನ್ನು ತವರಿಗೆ ತಂದು ಅಂತ್ಯಕ್ರಿಯೆ ನಡೆಸಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಉಳಿದ ಯೋಧರ ಪಾರ್ಥಿವ ಶರೀರಗಳನ್ನು ತರುವಲ್ಲಿ ವಿಳಂಬವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಡದಿ ಟೌನ್​​ಶಿಪ್​​ಗೆ ರೈತರ ಒಪ್ಪಿಗೆ; HDK ವಿರೋಧದ ನಡುವೆ ಜೂನ್ 1 ರಿಂದಲೇ ಹಣ ಬಿಡುಗಡೆ: ಡಿಕೆಶಿ ಮಹತ್ವದ ಘೋಷಣೆ

ಆರ್ಥಿಕತೆ ಎಕ್ಕುಟ್ಟಿ ಹೋಗಲಿ, ಆದ್ರೆ ಮೆಲೋನಿಗೆ 'ಮೆಲೋಡಿ' ಕೊಡುವುದು ತಡವಾಗ್ಬಾರ್ದು: ಖರ್ಗೆ ಕಿಡಿ

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಬಟ್ಟೆ ಎತ್ತಿ ನೋಡಿ ಪರಾರಿಯಾದ ದುರುಳ, ಪೊಲೀಸ್ ತನಿಖೆ ಆರಂಭ

'My magical May, one more win': 'ವಿಜಯ'ದ ಸಂಭ್ರಮ ಹಂಚಿಕೊಂಡ ತ್ರಿಶಾ

ಕೇರಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದ ಬೆನ್ನಲ್ಲೇ ಹಾಲಿನ ದರ 4 ರೂ. ಹೆಚ್ಚಳ; ಜೂನ್ 1 ರಿಂದ ಜಾರಿ

SCROLL FOR NEXT