ಅಂತಿಮ ಗೌರವ 
ದೇಶ

ಭಾರತೀಯ ಸೇನೆಯಿಂದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಯೋಧರಿಗೆ ಅಂತಿಮ ಗೌರವ

ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಒಂಬತ್ತು ವೀರಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಒಂಬತ್ತು ವೀರಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು.

ನವದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಹುತಾತ್ಮ ಯೋಧರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಭಾರತೀಯ ಸೇನೆಯ ಹಲವು ಅಧಿಕಾರಿಗಳು ರಕ್ಷಣಾ ಇಲಾಖೆ ಅಧಿಕಾರಿಗಳು ಯೋಧರ ಅಂತಿಮ ದರ್ಶನ ಪಡೆದರು.

ಹುತಾತ್ಮರಾದ 9 ಯೋಧರ ಪಾರ್ಥಿವ ಶರೀರವನ್ನು ಭಾನುವಾರ ಲೇಹ್ ಗೆ ತರಲಾಗಿತ್ತು. ಇದೀಗ ಪಾಲಂ ವಿಮಾನ ನಿಲ್ದಾಣದಲ್ಲಿ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಪಾರ್ಥಿವ ಶರೀರವನ್ನು ಬೆಂಗಳೂರು, ಪುಣೆ, ಹೈದರಾಬಾದ್, ಮಧುರೈ, ಚೆನ್ನೈ ಹಾಗೂ ತಿರುವನಂತಪುರಂಗೆ ರವಾನಿಸಲಾಗುತ್ತದೆ.

ಸಿಯಾಚಿನ್ ನಲ್ಲಿ ಫೆಬ್ರವರಿ 3 ರಂದು ಸಂಭವಿಸಿದ ಭೀಕರ ಹಿಮಪಾತದಲ್ಲಿ 9 ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಧಾರವಾಡದ ಯೋಧ ಹನುಮಂತಪ್ಪ ಕೊಪ್ಪದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಕಳೆದ ವಾರವೇ ಅವರ ಪಾರ್ಥಿವ ಶರೀರವನ್ನು ತವರಿಗೆ ತಂದು ಅಂತ್ಯಕ್ರಿಯೆ ನಡೆಸಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಉಳಿದ ಯೋಧರ ಪಾರ್ಥಿವ ಶರೀರಗಳನ್ನು ತರುವಲ್ಲಿ ವಿಳಂಬವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT