ಅಂತಿಮ ಗೌರವ 
ದೇಶ

ಭಾರತೀಯ ಸೇನೆಯಿಂದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಯೋಧರಿಗೆ ಅಂತಿಮ ಗೌರವ

ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಒಂಬತ್ತು ವೀರಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಒಂಬತ್ತು ವೀರಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು.

ನವದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಹುತಾತ್ಮ ಯೋಧರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಭಾರತೀಯ ಸೇನೆಯ ಹಲವು ಅಧಿಕಾರಿಗಳು ರಕ್ಷಣಾ ಇಲಾಖೆ ಅಧಿಕಾರಿಗಳು ಯೋಧರ ಅಂತಿಮ ದರ್ಶನ ಪಡೆದರು.

ಹುತಾತ್ಮರಾದ 9 ಯೋಧರ ಪಾರ್ಥಿವ ಶರೀರವನ್ನು ಭಾನುವಾರ ಲೇಹ್ ಗೆ ತರಲಾಗಿತ್ತು. ಇದೀಗ ಪಾಲಂ ವಿಮಾನ ನಿಲ್ದಾಣದಲ್ಲಿ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಪಾರ್ಥಿವ ಶರೀರವನ್ನು ಬೆಂಗಳೂರು, ಪುಣೆ, ಹೈದರಾಬಾದ್, ಮಧುರೈ, ಚೆನ್ನೈ ಹಾಗೂ ತಿರುವನಂತಪುರಂಗೆ ರವಾನಿಸಲಾಗುತ್ತದೆ.

ಸಿಯಾಚಿನ್ ನಲ್ಲಿ ಫೆಬ್ರವರಿ 3 ರಂದು ಸಂಭವಿಸಿದ ಭೀಕರ ಹಿಮಪಾತದಲ್ಲಿ 9 ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಧಾರವಾಡದ ಯೋಧ ಹನುಮಂತಪ್ಪ ಕೊಪ್ಪದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಕಳೆದ ವಾರವೇ ಅವರ ಪಾರ್ಥಿವ ಶರೀರವನ್ನು ತವರಿಗೆ ತಂದು ಅಂತ್ಯಕ್ರಿಯೆ ನಡೆಸಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಉಳಿದ ಯೋಧರ ಪಾರ್ಥಿವ ಶರೀರಗಳನ್ನು ತರುವಲ್ಲಿ ವಿಳಂಬವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!