ಅಂತಿಮ ಗೌರವ 
ದೇಶ

ಭಾರತೀಯ ಸೇನೆಯಿಂದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಯೋಧರಿಗೆ ಅಂತಿಮ ಗೌರವ

ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಒಂಬತ್ತು ವೀರಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಒಂಬತ್ತು ವೀರಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು.

ನವದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಹುತಾತ್ಮ ಯೋಧರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಭಾರತೀಯ ಸೇನೆಯ ಹಲವು ಅಧಿಕಾರಿಗಳು ರಕ್ಷಣಾ ಇಲಾಖೆ ಅಧಿಕಾರಿಗಳು ಯೋಧರ ಅಂತಿಮ ದರ್ಶನ ಪಡೆದರು.

ಹುತಾತ್ಮರಾದ 9 ಯೋಧರ ಪಾರ್ಥಿವ ಶರೀರವನ್ನು ಭಾನುವಾರ ಲೇಹ್ ಗೆ ತರಲಾಗಿತ್ತು. ಇದೀಗ ಪಾಲಂ ವಿಮಾನ ನಿಲ್ದಾಣದಲ್ಲಿ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಪಾರ್ಥಿವ ಶರೀರವನ್ನು ಬೆಂಗಳೂರು, ಪುಣೆ, ಹೈದರಾಬಾದ್, ಮಧುರೈ, ಚೆನ್ನೈ ಹಾಗೂ ತಿರುವನಂತಪುರಂಗೆ ರವಾನಿಸಲಾಗುತ್ತದೆ.

ಸಿಯಾಚಿನ್ ನಲ್ಲಿ ಫೆಬ್ರವರಿ 3 ರಂದು ಸಂಭವಿಸಿದ ಭೀಕರ ಹಿಮಪಾತದಲ್ಲಿ 9 ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಧಾರವಾಡದ ಯೋಧ ಹನುಮಂತಪ್ಪ ಕೊಪ್ಪದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಕಳೆದ ವಾರವೇ ಅವರ ಪಾರ್ಥಿವ ಶರೀರವನ್ನು ತವರಿಗೆ ತಂದು ಅಂತ್ಯಕ್ರಿಯೆ ನಡೆಸಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಉಳಿದ ಯೋಧರ ಪಾರ್ಥಿವ ಶರೀರಗಳನ್ನು ತರುವಲ್ಲಿ ವಿಳಂಬವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT