ದೆಹಲಿ ಹೈಕೋರ್ಟ್ ಮತ್ತು ಜೆಎನ್ ಯು ವಿವಾದ (ಸಂಗ್ರಹ ಚಿತ್ರ) 
ದೇಶ

ಎನ್ ಐಎಗೆ ಜೆಎನ್ ಯು ತನಿಖೆ ಜವಾಬ್ದಾರಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಘರ್ಷಣೆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ...

ನವದೆಹಲಿ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಘರ್ಷಣೆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ  ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ರಂಜನ್ ಅಗ್ನಿಹೋತ್ರಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ನ್ಯಾಯಮೂರ್ತಿ ಮನಮೋಹನ್ ಅವರ ಪೀಠ ಅರ್ಜಿಯನ್ನು ಅಕಾಲಿಕ ಎಂದು ಪರಿಗಣಿಸಿ  ವಜಾಗೊಳಿಸಿದೆ. "ಫೆಬ್ರವರಿ 9ರಂದು ನಡೆದಿದ್ದ ಘಟನೆ ಸಂಬಂಧ ಈಗಾಗಲೇ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತೀರಾ ಅನಿವಾರ್ಯವಾಗದ ಹೊರತು ಪ್ರಕರಣದ ತನಿಖೆಯಲ್ಲಿ ನ್ಯಾಯಾಲಯ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ನ್ಯಾಯಮೂರ್ತಿ ಮನಮೋಹನ್ ಹೇಳಿದ್ದಾರೆ.

ಇದಕ್ಕೂ ಮೊದಲು ರಿಟ್ ಅರ್ಜಿ ಸಲ್ಲಿಸಿದ್ದ ಅರ್ಜಿದಾರ ರಂಜನ್ ಅಗ್ನಿಹೋತ್ರಿ ಅವರು ತಮ್ಮ ವಾದ ಮಂಡಿಸುತ್ತಾ, ಇದೊಂದು ಗಂಭೀರ ಮತ್ತು ಸೂಕ್ಷ್ಮ ಪ್ರಕರಣವಾಗಿದೆ. ಜವಾಹರ ಲಾಲ್  ವಿಶ್ವವಿದ್ಯಾಲಯದ ಆವರಣದಲ್ಲಿ ದೇಶ ದ್ರೋಹಿ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳಿದರು. ಇದಕ್ಕೆ ಬೆಂಬಲ ಸೂಚಿಸಿದ ಅಗ್ನಿಹೋತ್ರಿ ಅವರ ಪರ ವಕೀಲ ಹರಿ ಶಂಕರ್ ಅವರು, ಕೆಲ  ವಿದ್ಯಾರ್ಥಿಗಳಿಂದ ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಧಕ್ಕೆಯಾಗಿದೆ. ವಿವಿಗೆ ಸಂಬಂಧಿಸಿದ ಕೆಲ ವ್ಯಕ್ತಿಗಳು ಪ್ರಕರಣದ ಹಿಂದಿದ್ದು, ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ರಾಷ್ಟ್ರೀಯ  ತನಿಖಾ ದಳಕ್ಕೆ ವಹಿಸಬೇಕು ಎಂದು ಮನವಿ ಮಾಡಿಕೊಂಡರು.

ಇದಕ್ಕೆ ಉತ್ತರಿಸಿದ ನ್ಯಾಯಾಲಯ, ನಾವೇನು ರಾಜಕಾರಣಿಗಳಲ್ಲ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಕಾನೂನು ಮತ್ತು ಪೊಲೀಸರು ಇದರ ಮೇಲ್ವಿಚಾರಣೆ ನೋಡುತ್ತಿದ್ದಾರೆ ಎಂದು ಹೇಳಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT