ಶವಪೆಟ್ಟಿಗೆ ಮುಂದೆ ಜಯಲಲಿತಾ ಭಾವಚಿತ್ರ 
ದೇಶ

ಸಿಯಾಚಿನ್ ಯೋಧರ ಶವಪೆಟ್ಟಿಗೆ ಮೇಲೂ ಜಯಲಲಿತಾ ಬೆಂಬಲಿಗರ ಫೋಟೋ ರಾಜಕೀಯ

ಸಿಯಾಚಿನ್ ದುರಂತದಲ್ಲಿ ಹುತಾತ್ಮರಾದ ಯೋಧರ ಶವ ಪೆಟ್ಟಿಗೆ ಮೇಲೂ ಜಯಲಲಿತಾ ಫೋಟೋ ಹಾಕಿ ಅಮ್ಮನ ಕೃಪೆಗೆ ಪಾತ್ರರಾಗಲು ಯತ್ನಿಸಿ ಎಲ್ಲರ ಕೆಂಗಣ್ಣಿಗೆ...

ನವದೆಹಲಿ:  ಪ್ರವಾಹ ಸಂತ್ರಸ್ತರಿಗೆ ನೀಡುವ ಎಲ್ಲಾ ವಸ್ತುಗಳ ಮೇಲೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಫೋಟೋ ಹಾಕಿ ನೀಡಿದ್ದ ಬೆಂಬಲಿಗರು ಸಿಯಾಚಿನ್ ದುರಂತದಲ್ಲಿ ಹುತಾತ್ಮರಾದ ಯೋಧರ ಶವ ಪೆಟ್ಟಿಗೆ ಮೇಲೂ ಜಯಲಲಿತಾ ಫೋಟೋ ಹಾಕಿ ಅಮ್ಮನ ಕೃಪೆಗೆ ಪಾತ್ರರಾಗಲು ಯತ್ನಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಿಯಾಚಿನ್ ನಲ್ಲಿ ಮಡಿದ ಮಧುರೈನ ಗಣೇಶನ್ ಅವರ ಕುಟುಂಬಕ್ಕೆ ತಮಿಳು ನಾಡು ಸರ್ಕಾರ 10 ಲಕ್ಷ ರೂಪಾಯಿ ಚೆಕ್ ನೀಡಿದೆ. ಈ ವೇಳೆ ಜಯಲಲಿತಾ ಸಂಪುಟದ ಸಹಕಾರ ಸಚಿವ ಕೆ. ರಾಜು ಮೃತ ಯೋಧನ ಶವ ಪೆಟ್ಟಿಗೆ ಮುಂಭಾಗ ಮುಖ್ಯಮಂತ್ರಿ ಜಯಲಲಿತಾ ಫೋಟೋ ಇಟ್ಟು ಚೆಕ್ ನೀಡಿ. ಕ್ಯಾಮೆರಾಗಳಿಗೆ ಪೋಸ್ ಕೊಟ್ಟಿದ್ದಾರೆ.

ಮಗನನ್ನು ಕಳೆದು ಕೊಂಡ ದುಃಖದಲ್ಲಿದ್ದ ತಾಯಿ ಕೈ ಗೆ ಜಯಲಲಿತಾ ಭಾವಚಿತ್ರ ನೀಡಿ ಫೋಟೋ ತೆಗೆಸಿಕೊಂಡಿರುವ ಚಿತ್ರ ಸಾಮಾಜಿಕ ಜಾಲತಾಗಳಲ್ಲಿ ವೈರಲ್ ಆಗಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಈ ಬಗ್ಗೆ ಸಚಿವ ರಾಜು ಅವರನ್ನು ಕೇಳಿದರೇ, ಮೃತ ಯೋಧನ ಕುಟುಂಬಕ್ಕೆ ಯಾವ ಸರ್ಕಾರ ಪರಿಹಾರ ಧನ ನೀಡಿತು ಎಂಬುದು ಜನರಿಗೆ ತಿಳಿಯಬೇಕು ಎಂಬ ಉದ್ದೇಶದಿಂದ ಈ ರೀತಿ ಮಾಡಲಾಯಿತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT