ಶವಪೆಟ್ಟಿಗೆ ಮುಂದೆ ಜಯಲಲಿತಾ ಭಾವಚಿತ್ರ 
ದೇಶ

ಸಿಯಾಚಿನ್ ಯೋಧರ ಶವಪೆಟ್ಟಿಗೆ ಮೇಲೂ ಜಯಲಲಿತಾ ಬೆಂಬಲಿಗರ ಫೋಟೋ ರಾಜಕೀಯ

ಸಿಯಾಚಿನ್ ದುರಂತದಲ್ಲಿ ಹುತಾತ್ಮರಾದ ಯೋಧರ ಶವ ಪೆಟ್ಟಿಗೆ ಮೇಲೂ ಜಯಲಲಿತಾ ಫೋಟೋ ಹಾಕಿ ಅಮ್ಮನ ಕೃಪೆಗೆ ಪಾತ್ರರಾಗಲು ಯತ್ನಿಸಿ ಎಲ್ಲರ ಕೆಂಗಣ್ಣಿಗೆ...

ನವದೆಹಲಿ:  ಪ್ರವಾಹ ಸಂತ್ರಸ್ತರಿಗೆ ನೀಡುವ ಎಲ್ಲಾ ವಸ್ತುಗಳ ಮೇಲೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಫೋಟೋ ಹಾಕಿ ನೀಡಿದ್ದ ಬೆಂಬಲಿಗರು ಸಿಯಾಚಿನ್ ದುರಂತದಲ್ಲಿ ಹುತಾತ್ಮರಾದ ಯೋಧರ ಶವ ಪೆಟ್ಟಿಗೆ ಮೇಲೂ ಜಯಲಲಿತಾ ಫೋಟೋ ಹಾಕಿ ಅಮ್ಮನ ಕೃಪೆಗೆ ಪಾತ್ರರಾಗಲು ಯತ್ನಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಿಯಾಚಿನ್ ನಲ್ಲಿ ಮಡಿದ ಮಧುರೈನ ಗಣೇಶನ್ ಅವರ ಕುಟುಂಬಕ್ಕೆ ತಮಿಳು ನಾಡು ಸರ್ಕಾರ 10 ಲಕ್ಷ ರೂಪಾಯಿ ಚೆಕ್ ನೀಡಿದೆ. ಈ ವೇಳೆ ಜಯಲಲಿತಾ ಸಂಪುಟದ ಸಹಕಾರ ಸಚಿವ ಕೆ. ರಾಜು ಮೃತ ಯೋಧನ ಶವ ಪೆಟ್ಟಿಗೆ ಮುಂಭಾಗ ಮುಖ್ಯಮಂತ್ರಿ ಜಯಲಲಿತಾ ಫೋಟೋ ಇಟ್ಟು ಚೆಕ್ ನೀಡಿ. ಕ್ಯಾಮೆರಾಗಳಿಗೆ ಪೋಸ್ ಕೊಟ್ಟಿದ್ದಾರೆ.

ಮಗನನ್ನು ಕಳೆದು ಕೊಂಡ ದುಃಖದಲ್ಲಿದ್ದ ತಾಯಿ ಕೈ ಗೆ ಜಯಲಲಿತಾ ಭಾವಚಿತ್ರ ನೀಡಿ ಫೋಟೋ ತೆಗೆಸಿಕೊಂಡಿರುವ ಚಿತ್ರ ಸಾಮಾಜಿಕ ಜಾಲತಾಗಳಲ್ಲಿ ವೈರಲ್ ಆಗಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಈ ಬಗ್ಗೆ ಸಚಿವ ರಾಜು ಅವರನ್ನು ಕೇಳಿದರೇ, ಮೃತ ಯೋಧನ ಕುಟುಂಬಕ್ಕೆ ಯಾವ ಸರ್ಕಾರ ಪರಿಹಾರ ಧನ ನೀಡಿತು ಎಂಬುದು ಜನರಿಗೆ ತಿಳಿಯಬೇಕು ಎಂಬ ಉದ್ದೇಶದಿಂದ ಈ ರೀತಿ ಮಾಡಲಾಯಿತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ