ಪಟಿಯಾಲಾ ಹೌಸ್ ಕೋರ್ಟ್ ಆವರಣದಲ್ಲಿ ಪ್ರತಿಭಟನೆಯಲ್ಲಿ ನಿರತ ವಕೀಲರು 
ದೇಶ

ಪಾಟಿಯಾಲಾ ಕೋರ್ಟ್ ನಲ್ಲಿ ಮತ್ತೆ ಪತ್ರಕರ್ತರ ಮೇಲೆ ಹಲ್ಲೆ

ವಕೀಲರ ಎರಡು ಗುಂಪುಗಳು ಕೋರ್ಟ್ ಆವರಣದಲ್ಲಿ ಘೋಷಣೆ ಕೂಗಿ, ಪರಸ್ಪರ ಬಡಿದಾಡಿಕೊಂಡಿದ್ದಲ್ಲದೇ ಮತ್ತೆ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ...

ನವದೆಹಲಿ: ಪಟಿಯಾಲಾ ಹೌಸ್ ಕೋರ್ಟ್ ಇಂದು ಮತ್ತೊಮ್ಮೆ ಮತ್ತೊಂದು ಹೈಡ್ರಾಮಾಗೆ ಸಾಕ್ಷಿಯಾಯಿತು. ವಕೀಲರ ಎರಡು ಗುಂಪುಗಳು ಕೋರ್ಟ್ ಆವರಣದಲ್ಲಿ ಘೋಷಣೆ ಕೂಗಿ, ಪರಸ್ಪರ ಬಡಿದಾಡಿಕೊಂಡಿದ್ದಲ್ಲದೇ ಮತ್ತೆ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.

ವಕೀಲರ ಒಂದು ಗುಂಪು ಕನ್ಹಯ್ಯ ಪರವಾಗಿ ಮತ್ತೊಂದು ಗುಂಪು ಕನ್ಹಯ್ಯ ವಿರೋಧವಾಗಿ ಘೋಷಣೆ ಕೂಗುತ್ತಿದ್ದರು. ಅಲ್ಲಿ ಏನಾಗಿದೆ ಎಂದು ನೋಡಲು ಪೊಲೀಸರು ಇದ್ದ ಸ್ಥಳದಲ್ಲೇ ಹೋದೆ. ಅಷ್ಟರಲ್ಲಿ ಕನ್ಹಯ್ಯ ವಿರೋಧಿ ಗುಂಪಿನ ವಕೀಲರೊಬ್ಬರು ನನ್ನ ಪೋಟೋ ತೆಗೆದು ಕೊಂಡು ನನಗೆ ಥಳಿಸಿದರು ಎಂದು ಆಂಗ್ಲ ಚಾನೆಲ್ ವರದಿಗಾರರು ಹೇಳಿದ್ದಾರೆ.

ವಕೀಲರಿಂದ ನನ್ನ ಮೇಲೆ ಹಲ್ಲೆ ನಡೆಯುತ್ತಿದ್ದರೂ ಪೊಲೀಸರು ಸುಮ್ಮನೆ ನೋಡುತ್ತಾ ನಿಂತಿದ್ದರೇ ಹೊರತು ನನ್ನನ್ನು ರಕ್ಷಿಸಲು ಬರಲಿಲ್ಲ ಎಂದು ಆರೋಪಿಸಿದ್ದಾರೆ. ನನ್ನನ್ನು ರಕ್ಷಿಸಿ ಎಂದು ಪದೇ ಪದೇ ಕೇಳಿಕೊಂಡರು ಯಾರೊಬ್ಬರು ನನ್ನ ಸಹಾಯಕ್ಕೆ ಬರಲಿಲ್ಲ ಎಂದು ತಿಳಿಸಿದ್ದಾರೆ.

ರಾಷ್ಟ್ರದ್ರೋಹ ಆಪಾದನೆಯಲ್ಲಿ ಬಂಧಿತರಾಗಿರುವ ಕನ್ಹಯ್ಯ ಕುಮಾರ್ ಅವರನ್ನು ಎರಡು ದಿನಗಳ ಹಿಂದೆ ಹಾಜರು ಪಡಿಸುವ ವೇಳೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದ ಹೊರಗೆ ಸಂಭವಿಸಿದ ಹಿಂಸಾಚಾರಗಳ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು. ಜೆಎನ್ ಯು ವಿದ್ಯಾರ್ಥಿಗಳ ವಿರುದ್ಧ ಕಠಿಣ ಮಾರ್ಗ ಸೂಚಿ ಅನುಸರಿಸುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT