ವೈಎಂಸಿಎ ಕಾಲೇಜು 
ದೇಶ

ವಾಟ್ಸ್ ಆಪ್ ನಲ್ಲಿ ದಲಿತ ವಿದ್ಯಾರ್ಥಿಗಳ ಬಗ್ಗೆ ಅವಹೇಳನಕಾರಿ ಚಿತ್ರ: ವೈಎಂಸಿಎ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮ

ದಲಿತ ವಿದ್ಯಾರ್ಥಿಗಳನ್ನು ಅವಹೇಳನಕಾರಿಯಾಗಿ ಬಿಂಬಿಸುವ ಚಿತ್ರವನ್ನು ವಾಟ್ಸ್ ಆಪ್ ನಲ್ಲಿ ಹಂಚಿಕೆ ಮಾಡಿದ್ದಕ್ಕಾಗಿ ಚೆನ್ನೈ ನ ವೈಎಂಸಿಎ ಕಾಲೇಜಿನ ಕೆಲವು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.

ಚೆನ್ನೈ: ದಲಿತ ವಿದ್ಯಾರ್ಥಿಗಳನ್ನು ಅವಹೇಳನಕಾರಿಯಾಗಿ ಬಿಂಬಿಸುವ ಚಿತ್ರವನ್ನು ವಾಟ್ಸ್ ಆಪ್ ನಲ್ಲಿ ಹಂಚಿಕೆ ಮಾಡಿದ್ದಕ್ಕಾಗಿ ಚೆನ್ನೈ ನ ವೈಎಂಸಿಎ ಕಾಲೇಜಿನ ಕೆಲವು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.
ವೈಎಂಸಿಎ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ವಾಟ್ಸ್ ಅಪ್ ನಲ್ಲಿ ದಲಿತ ವಿದ್ಯಾರ್ಥಿಗಳನ್ನು ಅವಹೇಳನಕಾರಿಯಾಗಿ ಬಿಂಬಿಸುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಇದರಿಂದಾಗಿ ಕಾಲೇಜ್ ನಲ್ಲಿ ಕೋಲಾಹಲ ಉಂಟಾಗಿದೆ. ಪ್ರಸ್ತುತ ಇರುವ ಮೀಸಲಾತಿ ವ್ಯವಸ್ಥೆಯನ್ನು ಟೀಕಿಸಲು ಹೋಗಿ ಈ ಪ್ರಮಾದ ಉಂಟಾಗಿದೆ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಹಾಗೂ ದಲಿತ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಯನ್ನು ಹೋಲಿಕೆ ಮಾಡುವ ಚಿತ್ರವನ್ನು ವಾಟ್ಸ್ ಆಪ್ ನಲ್ಲಿ ಹಂಚಿಕೆ ಮಾಡಲಾಗಿದೆ.
ಚಿತ್ರದಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯಲ್ಲಿ ತೊಡಗಿದ್ದರೆ, ಮೀಸಲಾತಿ ಪಡೆಯುವ ಅರ್ಹತೆಯುಳ್ಳ ವಿದ್ಯಾರ್ಥಿಗಳು ಮಾತ್ರ ಯಾವುದೇ ತಯಾರಿ ನಡೆಸದೆ ಮಲಗಿರುವ ಚಿತ್ರ ವಾಟ್ಸ್ ಆಪ್ ನಲ್ಲಿ ಹರಿದಾಡುತಿದೆ. ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವೈಎಂಸಿಎ ಕಾಲೇಜ್ ನ ದಲಿತ ವಿದ್ಯಾರ್ಥಿಗಳು ನಾವು ಪರೀಕ್ಷೆಗಳನ್ನು ಗಂಭೀರವಾಗಿ ಪರಿಗಣಿಸದೇ ಇದ್ದರೂ ಸಹ ಮೀಸಲಾತಿ ವ್ಯವಸ್ಥೆ ನಮ್ಮನ್ನು ಬೆಂಬಲಿಸುತ್ತಿರುವಂತೆ ಚಿತ್ರದಲ್ಲಿ ಬಿಂಬಿಸಲಾಗಿದೆ ಎಂದಿದ್ದಾರೆ. 
ಇಷ್ಟೇ ಅಲ್ಲದೇ ಇನ್ನೂ ಅನೇಕ ಸಂದರ್ಭದಗಳಲ್ಲಿ ವೈಎಂಸಿಎ ಕಾಲೇಜಿನಲ್ಲಿ ದಲಿತ ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ದಲಿತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT