ಸುಪ್ರೀಂಕೋರ್ಟ್ 
ದೇಶ

ಪಟಿಯಾಲಾ ಹೌಸ್ ಕೋರ್ಟ್ ಹಲ್ಲೆ ಪ್ರಕರಣ: ಪರಿಸ್ಥಿತಿ ಅವಲೋಕನಕ್ಕೆ ಸಮಿತಿ ರಚಿಸಿದ ಸುಪ್ರೀಂ

ಪಟಿಯಾಲ ಹೌಸ್‌ ಕೋರ್ಟ್‌ ಆವರಣದಲ್ಲಿ ಬುಧವಾರ ಮತ್ತೆ ಸಂಘರ್ಷ ನಡೆದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಅವಲೋಕಿಸಲು ವಕೀಲರ ತಂಡವನ್ನು ರಚಿಸಿದೆ..

ನವದೆಹಲಿ: ಪಟಿಯಾಲ ಹೌಸ್‌ ಕೋರ್ಟ್‌ ಆವರಣದಲ್ಲಿ ಬುಧವಾರ ಮತ್ತೆ ಸಂಘರ್ಷ ನಡೆದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಅವಲೋಕಿಸಲು ವಕೀಲರ ತಂಡವನ್ನು ರಚಿಸಿದೆ. ಜೊತೆಗೆ ಹತ್ತು ನಿಮಿಷಗಳಲ್ಲಿ ಪರಿಸ್ಥಿತಿ ಕಂಡುಕೊಂಡು ತಿಳಿಸುವಂತೆ ಆರು ಮಂದಿ ವಕೀಲರ ತಂಡಕ್ಕೆ ನ್ಯಾಯಾಲಯ ಸೂಚಿಸಿತು.

ಪಟಿಯಾಲಾ ಹೌಸ್ ಕೋರ್ಟ್ ಆವರಣದಲ್ಲಿ ಭಯೋತ್ಪಾದಕ ವಾತಾವರಣ ಇತ್ತು ಎಂದು ಆರು ಮಂದಿ ತಂಡ ಹೇಳಿದೆ. ಜೊತೆಗೆ ಕೋರ್ಟ್ ಆವರಣದಲ್ಲಿ ಸಣ್ಣ ಸಣ್ಣ ಕಲ್ಲುಗಳನ್ನು ತೂರಲಾಗುತ್ತಿತ್ತು ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ. ಇನ್ನು ಘಟನೆಗೆ ಕಾರಣವಾದರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆಯೂ ದೆಹಲಿ ಪೊಲೀಸ್ ಪರ ಹಾಜರಾಗಿದ್ದ ವಕೀಲರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಕೂಡಲೇ ವಿಚಾರಣೆಯನ್ನು ಮುಂದೂಡಿ, ಕೋರ್ಟ್‌ ಕೊಠಡಿಯಲ್ಲಿದ್ದವರನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಮ್ಯಾಜಿಸ್ಟ್ರೇಟ್‌ ಜತೆಗೆ ಮಾತನಾಡುವಂತೆ ದೆಹಲಿ ಪೊಲೀಸ್‌ ಪರ ವಕೀಲ ಅಜಿತ್ ಸಿನ್ಹಾ ಅವರಿಗೆ ನ್ಯಾಯಾಲಯ ನಿರ್ದೇಶನ ನೀಡಿತು. ಆರೋಪಿ ಕನ್ಹಯ್ಯಾ ಅವರ ಮೇಲೆ ಹಲ್ಲೆ ನಡೆದಿದೆ ಎಂದು ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ನ್ಯಾಯಾಲಯದ ಗಮನಕ್ಕೆ ತಂದರು. ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ ನ್ಯಾಯಾಲಯ, ಪರಿಸ್ಥಿತಿ ಅವಲೋಕನಕ್ಕೆ ಸ್ಥಳೀಯ ಆಯುಕ್ತರೊಬ್ಬರನ್ನು ನೇಮಿಸುವ ಎಚ್ಚರಿಕೆಯನ್ನೂ ನೀಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?