ಸುಪ್ರೀಂಕೋರ್ಟ್ 
ದೇಶ

ಪಟಿಯಾಲಾ ಹೌಸ್ ಕೋರ್ಟ್ ಹಲ್ಲೆ ಪ್ರಕರಣ: ಪರಿಸ್ಥಿತಿ ಅವಲೋಕನಕ್ಕೆ ಸಮಿತಿ ರಚಿಸಿದ ಸುಪ್ರೀಂ

ಪಟಿಯಾಲ ಹೌಸ್‌ ಕೋರ್ಟ್‌ ಆವರಣದಲ್ಲಿ ಬುಧವಾರ ಮತ್ತೆ ಸಂಘರ್ಷ ನಡೆದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಅವಲೋಕಿಸಲು ವಕೀಲರ ತಂಡವನ್ನು ರಚಿಸಿದೆ..

ನವದೆಹಲಿ: ಪಟಿಯಾಲ ಹೌಸ್‌ ಕೋರ್ಟ್‌ ಆವರಣದಲ್ಲಿ ಬುಧವಾರ ಮತ್ತೆ ಸಂಘರ್ಷ ನಡೆದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಅವಲೋಕಿಸಲು ವಕೀಲರ ತಂಡವನ್ನು ರಚಿಸಿದೆ. ಜೊತೆಗೆ ಹತ್ತು ನಿಮಿಷಗಳಲ್ಲಿ ಪರಿಸ್ಥಿತಿ ಕಂಡುಕೊಂಡು ತಿಳಿಸುವಂತೆ ಆರು ಮಂದಿ ವಕೀಲರ ತಂಡಕ್ಕೆ ನ್ಯಾಯಾಲಯ ಸೂಚಿಸಿತು.

ಪಟಿಯಾಲಾ ಹೌಸ್ ಕೋರ್ಟ್ ಆವರಣದಲ್ಲಿ ಭಯೋತ್ಪಾದಕ ವಾತಾವರಣ ಇತ್ತು ಎಂದು ಆರು ಮಂದಿ ತಂಡ ಹೇಳಿದೆ. ಜೊತೆಗೆ ಕೋರ್ಟ್ ಆವರಣದಲ್ಲಿ ಸಣ್ಣ ಸಣ್ಣ ಕಲ್ಲುಗಳನ್ನು ತೂರಲಾಗುತ್ತಿತ್ತು ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ. ಇನ್ನು ಘಟನೆಗೆ ಕಾರಣವಾದರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆಯೂ ದೆಹಲಿ ಪೊಲೀಸ್ ಪರ ಹಾಜರಾಗಿದ್ದ ವಕೀಲರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಕೂಡಲೇ ವಿಚಾರಣೆಯನ್ನು ಮುಂದೂಡಿ, ಕೋರ್ಟ್‌ ಕೊಠಡಿಯಲ್ಲಿದ್ದವರನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಮ್ಯಾಜಿಸ್ಟ್ರೇಟ್‌ ಜತೆಗೆ ಮಾತನಾಡುವಂತೆ ದೆಹಲಿ ಪೊಲೀಸ್‌ ಪರ ವಕೀಲ ಅಜಿತ್ ಸಿನ್ಹಾ ಅವರಿಗೆ ನ್ಯಾಯಾಲಯ ನಿರ್ದೇಶನ ನೀಡಿತು. ಆರೋಪಿ ಕನ್ಹಯ್ಯಾ ಅವರ ಮೇಲೆ ಹಲ್ಲೆ ನಡೆದಿದೆ ಎಂದು ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ನ್ಯಾಯಾಲಯದ ಗಮನಕ್ಕೆ ತಂದರು. ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ ನ್ಯಾಯಾಲಯ, ಪರಿಸ್ಥಿತಿ ಅವಲೋಕನಕ್ಕೆ ಸ್ಥಳೀಯ ಆಯುಕ್ತರೊಬ್ಬರನ್ನು ನೇಮಿಸುವ ಎಚ್ಚರಿಕೆಯನ್ನೂ ನೀಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT