ಸುಪ್ರೀಂಕೋರ್ಟ್ 
ದೇಶ

ಪಟಿಯಾಲಾ ಹೌಸ್ ಕೋರ್ಟ್ ಹಲ್ಲೆ ಪ್ರಕರಣ: ಪರಿಸ್ಥಿತಿ ಅವಲೋಕನಕ್ಕೆ ಸಮಿತಿ ರಚಿಸಿದ ಸುಪ್ರೀಂ

ಪಟಿಯಾಲ ಹೌಸ್‌ ಕೋರ್ಟ್‌ ಆವರಣದಲ್ಲಿ ಬುಧವಾರ ಮತ್ತೆ ಸಂಘರ್ಷ ನಡೆದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಅವಲೋಕಿಸಲು ವಕೀಲರ ತಂಡವನ್ನು ರಚಿಸಿದೆ..

ನವದೆಹಲಿ: ಪಟಿಯಾಲ ಹೌಸ್‌ ಕೋರ್ಟ್‌ ಆವರಣದಲ್ಲಿ ಬುಧವಾರ ಮತ್ತೆ ಸಂಘರ್ಷ ನಡೆದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಅವಲೋಕಿಸಲು ವಕೀಲರ ತಂಡವನ್ನು ರಚಿಸಿದೆ. ಜೊತೆಗೆ ಹತ್ತು ನಿಮಿಷಗಳಲ್ಲಿ ಪರಿಸ್ಥಿತಿ ಕಂಡುಕೊಂಡು ತಿಳಿಸುವಂತೆ ಆರು ಮಂದಿ ವಕೀಲರ ತಂಡಕ್ಕೆ ನ್ಯಾಯಾಲಯ ಸೂಚಿಸಿತು.

ಪಟಿಯಾಲಾ ಹೌಸ್ ಕೋರ್ಟ್ ಆವರಣದಲ್ಲಿ ಭಯೋತ್ಪಾದಕ ವಾತಾವರಣ ಇತ್ತು ಎಂದು ಆರು ಮಂದಿ ತಂಡ ಹೇಳಿದೆ. ಜೊತೆಗೆ ಕೋರ್ಟ್ ಆವರಣದಲ್ಲಿ ಸಣ್ಣ ಸಣ್ಣ ಕಲ್ಲುಗಳನ್ನು ತೂರಲಾಗುತ್ತಿತ್ತು ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ. ಇನ್ನು ಘಟನೆಗೆ ಕಾರಣವಾದರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆಯೂ ದೆಹಲಿ ಪೊಲೀಸ್ ಪರ ಹಾಜರಾಗಿದ್ದ ವಕೀಲರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಕೂಡಲೇ ವಿಚಾರಣೆಯನ್ನು ಮುಂದೂಡಿ, ಕೋರ್ಟ್‌ ಕೊಠಡಿಯಲ್ಲಿದ್ದವರನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಮ್ಯಾಜಿಸ್ಟ್ರೇಟ್‌ ಜತೆಗೆ ಮಾತನಾಡುವಂತೆ ದೆಹಲಿ ಪೊಲೀಸ್‌ ಪರ ವಕೀಲ ಅಜಿತ್ ಸಿನ್ಹಾ ಅವರಿಗೆ ನ್ಯಾಯಾಲಯ ನಿರ್ದೇಶನ ನೀಡಿತು. ಆರೋಪಿ ಕನ್ಹಯ್ಯಾ ಅವರ ಮೇಲೆ ಹಲ್ಲೆ ನಡೆದಿದೆ ಎಂದು ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ನ್ಯಾಯಾಲಯದ ಗಮನಕ್ಕೆ ತಂದರು. ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ ನ್ಯಾಯಾಲಯ, ಪರಿಸ್ಥಿತಿ ಅವಲೋಕನಕ್ಕೆ ಸ್ಥಳೀಯ ಆಯುಕ್ತರೊಬ್ಬರನ್ನು ನೇಮಿಸುವ ಎಚ್ಚರಿಕೆಯನ್ನೂ ನೀಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT