ಬಾರ್ ಕೌನ್ಸಿಲ್ 
ದೇಶ

ಜೆಎನ್ ಯು ವಿದ್ಯಾರ್ಥಿಗಳ ಮೇಲೆ ವಕೀಲರಿಂದ ಹಲ್ಲೆ: ಪ್ರಕರಣದ ತನಿಖೆಗೆ ಬಾರ್ ಕೌನ್ಸಿಲ್ ನಿಂದ ಸಮಿತಿ ರಚನೆ

ಜೆಎನ್ ಯು ವಿವಾದಕ್ಕೆ ಸಂಬಂಧಿಸಿದಂತೆ ಜೆಎನ್ ಯು ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ವಕೀಲರ ಕೈವಾಡ ಇರುವುದರ ಬಗ್ಗೆ ತನಿಖೆ ನಡೆಸಲು ಬಾರ್ ಕೌನ್ಸಿಲ್ ಸಮಿತಿ ರಚಿಸಿದೆ.

ನವದೆಹಲಿ: ಜೆಎನ್ ಯು ವಿವಾದಕ್ಕೆ ಸಂಬಂಧಿಸಿದಂತೆ ಜೆಎನ್ ಯು ವಿವಿ ವಿದ್ಯಾರ್ಥಿಗಳ ಮೇಲೆ ಹಾಗೂ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ವಕೀಲರ ಕೈವಾಡ ಇರುವುದರ ಬಗ್ಗೆ ತನಿಖೆ ನಡೆಸಲು ವಕೀಲರ ಮಂಡಳಿ (ಬಾರ್ ಕೌನ್ಸಿಲ್) ಸಮಿತಿ ರಚಿಸಿದೆ.
ಹೈಕೋರ್ಟ್ ಒಂದರ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿಯ ವಕೀಲರು ಹಲ್ಲೆ ನಡೆಸಿರುವುದರ ಬಗ್ಗೆ ತನಿಖೆ ನಡೆಸಲಿದ್ದು ಮೂರು ವಾರದೊಳಗೆ ತನಿಖಾ ವರದಿ ನೀಡುವಂತೆ ತ್ರಿಸದಸ್ಯ ಸಮಿತಿಗೆ ಸೂಚನೆ ನೀಡಲಾಗಿದೆ ಎಂದು ಬಾರ್ ಕೌನ್ಸಿಲ್ ನ ಅಧ್ಯಕ್ಷ ಮನನ್ ಕುಮಾರ್ ಹೇಳಿದ್ದಾರೆ.    
ದೇಶಧ್ರೋಹದ ಆರೋಪದಡಿ  ಫೆ.15 ರಂದು ಜೆಎನ್ ಯು ವಿವಿ ವಿದ್ಯಾರ್ಥಿ ಸಂಘಟನೆ ನಾಯಕ ಕನ್ಹಯ್ಯ ಕುಮಾರ್ ನನ್ನು ಬಂಧನದ ವೇಳೆ ಕೆಲವು ವಕೀಲರು ಪತ್ರಕರ್ತರು ಹಾಗೂ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು. ಇದಾದ ಬಳಿಕ ಫೆ.17 ರಂದು ಸಂಘಟನೆ ನಾಯಕ ಕನ್ಹಯ್ಯ ಕುಮಾರ್ ನನ್ನು ವಕೀಲರು ಥಳಿಸಿದ ಪ್ರಕರಣ ವರದಿಯಾಗಿತ್ತು. ವಕೀಲರು ಹಲ್ಲೆ ನಡೆಸಿರುವುದು ಸಾಬೀತಾದರೆ ಅವರ ಪರವಾನಗಿಯನ್ನು ರದ್ದುಗೊಳಿಸಲಾಗುವುದು, ಬಾರ್ ಕೌನ್ಸಿಲ್ ನಿಂದ ಅಂತಹ ವಕೀಲರ ಹೆಸರನ್ನು ಕೈಬಿದಾಲಾಗುವುದು ಎಂದು ಮನನ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT