ಮಮತಾ ಬ್ಯಾನರ್ಜಿ 
ದೇಶ

ಜಾದವ್ ಪುರ ವಿಶ್ವವಿದ್ಯಾನಿಲಯದ ದೇಶವಿರೋಧಿಗಳ ಬಗ್ಗೆ ದೀದಿಯಿಂದ ವರದಿ ಕೇಳಿದ ಕೇಂದ್ರ

ದೇಶವಿರೋಧಿ ಘೋಷಣೆ ಕೂಗಿರುವ ಪಶ್ಚಿಮ ಬಂಗಾಳದ ಜಾದವ್ ಪುರ ವಿವಿಯ ವಿದ್ಯಾರ್ಥಿಗಳ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸೂಚಿಸಿದೆ.

ಕೋಲ್ಕತಾ: ಜೆಎನ್ ಯು ವಿವಿ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ದೇಶವಿರೋಧಿ ಘೋಷಣೆ ಕೂಗಿರುವ ಪಶ್ಚಿಮ ಬಂಗಾಳದ ಜಾದವ್ ಪುರ ವಿವಿಯ ವಿದ್ಯಾರ್ಥಿಗಳ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸೂಚಿಸಿದೆ.
ಫೆ.16 ರಂದು ಜೆಎನ್ ಯು ವಿವಿ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಜಾದವ್ ಪುರ ವಿವಿಯ ವಿದ್ಯಾರ್ಥಿಗಳ ಗುಂಪೊಂದು "ಕಾಶ್ಮೀರ ಸ್ವಾತಂತ್ರ್ಯ ಬಯಸುತ್ತಿದೆ, ಮಣಿಪುರ ಸ್ವಾತಂತ್ರ್ಯ ಬಯಸುತ್ತಿದೆ ನಾವು ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತೇವೆ", ಅಫ್ಜಲ್ ಗುರು ಎಂದರೆ ಸ್ವಾತಂತ್ರ್ಯ, ಗಿಲಾನೆ ಎಂದರೆ ಸ್ವಾತಂತ್ರ್ಯ ನಾವು ಸ್ವಾತಂತ್ರ್ಯ ಕಿತ್ತುಕೊಳ್ಳುತ್ತೇವೆ ಎಂಬ ಘೋಷಣೆ ಕೂಗಿದ್ದರು. ಈ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಬಗ್ಗೆ ವರದಿ ನೀಡುವಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗೃಹ ಸಚಿವಾಲಯ ಸೂಚನೆ ನೀಡಿದೆ. 
ವಿಡಿಯೋ ಕ್ಲಿಪ್ ನಲ್ಲಿ ನಿರ್ಜ್ಹರ್ ಮುಖರ್ಜಿ ಎಂಬ ವಿದ್ಯಾರ್ಥಿ ಈ ಘೋಷಣೆ ಕೂಗುತ್ತಿರುವುದು ಕಂಡುಬಂದಿದೆ. ತನ್ನ ಘೋಷಣೆಯನ್ನು ಸಮರ್ಥಿಸಿಕೊಂಡಿರುವ ಮುಖರ್ಜಿ ಎಂಬ ವಿದ್ಯಾರ್ಥಿ, ಸ್ವಾತಂತ್ರ್ಯ ಎಂದರೆ ಬಿಜೆಪಿ ಮತ್ತು ಆರ್ ಎಸ್ಎಸ್ ನಿಂದ ಸ್ವಾತಂತ್ರ್ಯ ಕಿತ್ತುಕೊಳ್ಳುತ್ತೇವೆ ಎಂದೇ ಹೊರತು ಪ್ರತ್ಯೇಕತಾವಾದಿ ಧೋರಣೆಯಲ್ಲ ಎಂದು ಹೇಳಿದ್ದಾರೆ. 
ಪ್ರತಿಭಟನೆ ಆಯೋಜಿಸಿದ್ದ ಮೂರು ವಿದ್ಯಾರ್ಥಿಗಳೂ ಸಹ ದೇಶವಿರೋಧಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದು ನಾವು ಪ್ರತಿಭಟನಾ ಮೆರವಣಿಗೆಯನ್ನಷ್ಟೇ ಹಮ್ಮಿಕೊಂಡಿದ್ದೆವು, ಆದರೆ ಕೆಲವು ಹಳೆಯ ವಿದ್ಯಾರ್ಥಿಗಳು ದೇಶವಿರೋಧಿ ಘೋಷಣೆ ಕೂಗಿರಬಹುದು. ಅದನ್ನು ನಾವು ಬೆಂಬಲಿಸುವುದಿಲ್ಲ, ನಮ್ಮ ಪ್ರತಿಭಟನೆ ಏನಿದ್ದರೂ ಜೆಎನ್ ಯು ವಿವಿಯ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅನುಚಿತವಾಗಿ ನಡೆದುಕೊಂಡಿದ್ದರ ವಿರುದ್ಧವಷ್ಟೇ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT