ಗೋಪಾಲ್ ಶೆಟ್ಟಿ 
ದೇಶ

ಆತ್ಮಹತ್ಯೆ ಮಾಡಿಕೊಳ್ಳುವುದು ರೈತರಿಗೆ ಫ್ಯಾಷನ್ ಆಗಿದೆ: ಬಿಜೆಪಿ ಸಂಸದ

ಆತ್ಮಹತ್ಯೆ ಮಾಡಿಕೊಳ್ಳುವುದು ರೈತರಿಗೆ ಫ್ಯಾಷನ್‌ನಂತೆ ಆಗಿ ಬಿಟ್ಟಿದೆ ಮತ್ತು ಜೀವ ಕಳೆದುಕೊಳ್ಳುವುದು ಟ್ರೆಂಡ್ ಆಗಿದೆ ಎಂದು ಹೇಳುವ ಮೂಲಕ...

ಮುಂಬೈ: ಆತ್ಮಹತ್ಯೆ ಮಾಡಿಕೊಳ್ಳುವುದು ರೈತರಿಗೆ ಫ್ಯಾಷನ್‌ನಂತೆ ಆಗಿ ಬಿಟ್ಟಿದೆ ಮತ್ತು ಜೀವ ಕಳೆದುಕೊಳ್ಳುವುದು ಟ್ರೆಂಡ್ ಆಗಿದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ವಿವಾದ ಸೃಷ್ಟಿಸಿದ್ದಾರೆ.
ಬುಧವಾರ ಬೋರಿವಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಶೆಟ್ಟಿ, ನಿರುದ್ಯೋಗ ಮತ್ತು ಹಸಿವಿನಿಂದಲೇ ಎಲ್ಲ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಆತ್ಮಹತ್ಯೆ ಎಂಬುದು ಫ್ಯಾಷನ್ ಆಗಿ ಬಿಟ್ಟಿದೆ, ಅದೇ ಟ್ರೆಂಡ್ ನಡೆಯುತ್ತಿದೆ ಎಂದು ಹೇಳಿದ್ದಾರೆ. 
ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಮಹಾರಾಷ್ಟ್ರ ಸರ್ಕಾರ ರು. 5 ಲಕ್ಷ ಪರಿಹಾರ ಧನ ನೀಡಿದರೆ, ಪಕ್ಕದ ರಾಜ್ಯಗಳಲ್ಲಿ ರು. 7 ಲಕ್ಷ ನೀಡಲಾಗುತ್ತಿದೆ. ಈ ರೈತರಿಗೆ ಪರಿಹಾರಧನ ನೀಡುವುದರಲ್ಲಿಯೂ ಸರ್ಕಾರಗಳು ಪೈಪೋಟಿ ನಡೆಸುತ್ತಿವೆ ಎಂದು ಶೆಟ್ಟಿ ಹೇಳಿದ್ದಾರೆ.
ಶೆಟ್ಟಿಯವರ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್, ಇದು ಬಿಜೆಪಿಗೆ ರೈತರತ್ತ ಇರುವ ನಿಲುವನ್ನು ತೋರಿಸುತ್ತದೆ ಎಂದಿದೆ.
ಬೆಳೆ ನಾಶ, ಸಾಲದಿಂದ ಕಂಗೆಟ್ಟ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಮಹಾರಾಷ್ಟ್ರದಲ್ಲಿ ರೈತರು ಬೆಳೆ ನಾಶದಿಂದ ಕಂಗೆಟ್ಟಿದ್ದಾರೆ. ಹೀಗಿರುವಾಗ ಶೆಟ್ಟಿ ಸಂವೇದನೆಯಿಲ್ಲದ ಹೇಳಿಕೆಯನ್ನು ನೀಡಿದ್ದಾರೆ. ಇದು ಬಿಜೆಪಿ ರೈತರ ಬಗ್ಗೆ ಯಾವ ನಿಲುವು ತೋರಿದೆ ಎಂಬುದಕ್ಕೆ ಹಿಡಿದ ಕನ್ನಡಿ ಎಂದು ಎಂಆರ್‌ಸಿಸಿ ಅಧ್ಯಕ್ಷ ಸಂಜಯ್ ನಿರುಪಮ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ ಸುಮಾರು 124 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಹಾ ಸರ್ಕಾರ ಬಾಂಬೆ ಹೈಕೋರ್ಟ್‌ಗೆ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT