ಗೋಪಾಲ್ ಶೆಟ್ಟಿ 
ದೇಶ

ಆತ್ಮಹತ್ಯೆ ಮಾಡಿಕೊಳ್ಳುವುದು ರೈತರಿಗೆ ಫ್ಯಾಷನ್ ಆಗಿದೆ: ಬಿಜೆಪಿ ಸಂಸದ

ಆತ್ಮಹತ್ಯೆ ಮಾಡಿಕೊಳ್ಳುವುದು ರೈತರಿಗೆ ಫ್ಯಾಷನ್‌ನಂತೆ ಆಗಿ ಬಿಟ್ಟಿದೆ ಮತ್ತು ಜೀವ ಕಳೆದುಕೊಳ್ಳುವುದು ಟ್ರೆಂಡ್ ಆಗಿದೆ ಎಂದು ಹೇಳುವ ಮೂಲಕ...

ಮುಂಬೈ: ಆತ್ಮಹತ್ಯೆ ಮಾಡಿಕೊಳ್ಳುವುದು ರೈತರಿಗೆ ಫ್ಯಾಷನ್‌ನಂತೆ ಆಗಿ ಬಿಟ್ಟಿದೆ ಮತ್ತು ಜೀವ ಕಳೆದುಕೊಳ್ಳುವುದು ಟ್ರೆಂಡ್ ಆಗಿದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ವಿವಾದ ಸೃಷ್ಟಿಸಿದ್ದಾರೆ.
ಬುಧವಾರ ಬೋರಿವಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಶೆಟ್ಟಿ, ನಿರುದ್ಯೋಗ ಮತ್ತು ಹಸಿವಿನಿಂದಲೇ ಎಲ್ಲ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಆತ್ಮಹತ್ಯೆ ಎಂಬುದು ಫ್ಯಾಷನ್ ಆಗಿ ಬಿಟ್ಟಿದೆ, ಅದೇ ಟ್ರೆಂಡ್ ನಡೆಯುತ್ತಿದೆ ಎಂದು ಹೇಳಿದ್ದಾರೆ. 
ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಮಹಾರಾಷ್ಟ್ರ ಸರ್ಕಾರ ರು. 5 ಲಕ್ಷ ಪರಿಹಾರ ಧನ ನೀಡಿದರೆ, ಪಕ್ಕದ ರಾಜ್ಯಗಳಲ್ಲಿ ರು. 7 ಲಕ್ಷ ನೀಡಲಾಗುತ್ತಿದೆ. ಈ ರೈತರಿಗೆ ಪರಿಹಾರಧನ ನೀಡುವುದರಲ್ಲಿಯೂ ಸರ್ಕಾರಗಳು ಪೈಪೋಟಿ ನಡೆಸುತ್ತಿವೆ ಎಂದು ಶೆಟ್ಟಿ ಹೇಳಿದ್ದಾರೆ.
ಶೆಟ್ಟಿಯವರ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್, ಇದು ಬಿಜೆಪಿಗೆ ರೈತರತ್ತ ಇರುವ ನಿಲುವನ್ನು ತೋರಿಸುತ್ತದೆ ಎಂದಿದೆ.
ಬೆಳೆ ನಾಶ, ಸಾಲದಿಂದ ಕಂಗೆಟ್ಟ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಮಹಾರಾಷ್ಟ್ರದಲ್ಲಿ ರೈತರು ಬೆಳೆ ನಾಶದಿಂದ ಕಂಗೆಟ್ಟಿದ್ದಾರೆ. ಹೀಗಿರುವಾಗ ಶೆಟ್ಟಿ ಸಂವೇದನೆಯಿಲ್ಲದ ಹೇಳಿಕೆಯನ್ನು ನೀಡಿದ್ದಾರೆ. ಇದು ಬಿಜೆಪಿ ರೈತರ ಬಗ್ಗೆ ಯಾವ ನಿಲುವು ತೋರಿದೆ ಎಂಬುದಕ್ಕೆ ಹಿಡಿದ ಕನ್ನಡಿ ಎಂದು ಎಂಆರ್‌ಸಿಸಿ ಅಧ್ಯಕ್ಷ ಸಂಜಯ್ ನಿರುಪಮ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ ಸುಮಾರು 124 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಹಾ ಸರ್ಕಾರ ಬಾಂಬೆ ಹೈಕೋರ್ಟ್‌ಗೆ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT